ಕ್ರೀಡೆ

IPL 2024‌ Final : ಶರಣಾದ ಸನ್‌ರೈಸರ್ಸ್‌; ಮೂರನೇ ಬಾರಿಗೆ ಚಾಂಪಿಯನ್‌ ಆದ ಕೆಕೆಆರ್

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮೂರನೇ ಬಾರಿಗೆ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಕೊಲ್ಕತ್ತಾ ನೈಟ್‌ ರೈಡರ್ಸ್‌ ಬೌಲಿಂಗ್‌ ದಾಳಿ ಎದುರು ಮಂಕಾಗಿ 18.3 ಓವರ್‌ಗಳಲ್ಲಿ ಕೇವಲ 113 ರನ್‌ಗಳಿಗೆ ಆಲ್‌ಔಟ್‌ ಆಗಿ 114 ರನ್‌ಗಳ ಗುರಿ ನೀಡಿತು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಕೊಲ್ಕತ್ತಾ ನೈಟ್‌ ರೈಡರ್ಸ್‌ ರಹ್ಮನುಲ್ಲಾ ಗುರ್ಬಝ್‌ ಹಾಗೂ ವೆಂಕಟೇಶ್‌ ಐಯ್ಯರ್‌ ಜತೆಯಾಟದ ನೆರವಿನಿಂದ 10.3 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 114 ರನ್‌ ಕಲೆಹಾಕಿತು.

ಸನ್ ರೈಸರ್ಸ್ ಹೈದರಾಬಾದ್ ಇನ್ನಿಂಗ್ಸ್: ತಂಡ ಕೇವಲ 21 ರನ್‌ಗಳಿಗೆ ತನ್ನ ಮೊದಲ 3 ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿ ನಂತರ ಎಲ್ಲಿಯೂ ಹೇಳಿಕೊಳ್ಳುವಂತ ಸುಧಾರಣೆಯನ್ನು ಕಾಣಲೇ ಇಲ್ಲ. ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ 2 (5) ರನ್ ಮತ್ತು ಟ್ರಾವಿಸ್ ಹೆಡ್ ‌ಡಕ್‌ಔಟ್‌ ಆದರು. ಇನ್ನುಳಿದಂತೆ ರಾಹುಲ್‌ ತ್ರಿಪಾಠಿ 9 (13) ರನ್‌, ಏಡನ್‌ ಮಾರ್ಕ್ರಮ್‌ 20 (23) ರನ್‌, ನಿತಿಶ್‌ ರೆಡ್ಡಿ 13 (10) ರನ್‌, ಹೆನ್‌ರಿಚ್‌ ಕ್ಲಾಸೆನ್‌ 16 (17) ರನ್‌, ಶಹಬಾಜ್‌ ಅಹ್ಮದ್‌ 8 (7) ರನ್‌, ಅಬ್ದುಲ್‌ ಸಮದ್‌ 4 (4) ರನ್‌, ನಾಯಕ ಪ್ಯಾಟ್‌ ಕಮಿನ್ಸ್‌ 24 (19) ರನ್‌, ಜಯದೇವ್‌ ಉನಾದ್ಕತ್‌ 4 (11) ರನ್‌ ಮತ್ತು ಭುವನೇಶ್ವರ್‌ ಕುಮಾರ್‌ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.

ಕೊಲ್ಕತ್ತಾ ನೈಟ್‌ ರೈಡರ್ಸ್‌ ಪರ ಆಂಡ್ರೆ ರಸೆಲ್‌ 3 ವಿಕೆಟ್‌, ಮಿಚೆಲ್‌ ಸ್ಟಾರ್ಕ್‌ ಮತ್ತು ಹರ್ಷಿತ್‌ ರಾಣಾ ತಲಾ ಎರಡೆರಡು ವಿಕೆಟ್‌, ವೈಭವ್‌ ಅರೋರಾ, ಸುನಿಲ್ ನರೈನ್‌ ಮತ್ತು ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಪಡೆದರು.

ಕೊಲ್ಕತ್ತಾ ನೈಟ್‌ ರೈಡರ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಸುನಿಲ್‌ ನರೈನ್‌ ಹಾಗೂ ರಹ್ಮನುಲ್ಲಾ ಗುರ್ಬಝ್‌ ಕಣಕ್ಕಿಳಿದರು. ಸುನಿಲ್‌ ನರೈನ್‌ 6 (2) ರನ್‌ ಗಳಿಸಿ ಔಟ್‌ ಆದರೆ, ರಹ್ಮನುಲ್ಲಾ ಗುರ್ಬಝ್‌ 39 (32) ರನ್‌ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅಬ್ಬರಿಸಿದ ವೆಂಕಟೇಶ್‌ ಐಯ್ಯರ್‌ 26 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್‌ ಸಹಿತ ಅಜೇಯ 52 ರನ್‌ ಬಾರಿಸಿದರು ಮತ್ತು ನಾಯಕ ಶ್ರೇಯಸ್‌ ಐಯ್ಯರ್‌ ಅಜೇಯ 6 (3) ರನ್‌ ಕಲೆಹಾಕಿದರು.

ಸನ್‌ರೈಸರ್ಸ್‌ ಹೈದರಾಬಾದ್‌ ಪರ ನಾಯಕ ನಾಯಕ ಪ್ಯಾಟ್‌ ಕಮಿನ್ಸ್‌ ಹಾಗೂ ಶಹಬಾಜ್‌ ಅಹ್ಮದ್‌ ತಲಾ ಒಂದೊಂದು ವಿಕೆಟ್‌ ಪಡೆದರು,

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಇಬ್ಬರು ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

32 mins ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

2 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

3 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

3 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

3 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

4 hours ago