ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮೂರನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ಬೌಲಿಂಗ್ ದಾಳಿ ಎದುರು ಮಂಕಾಗಿ 18.3 ಓವರ್ಗಳಲ್ಲಿ ಕೇವಲ 113 ರನ್ಗಳಿಗೆ ಆಲ್ಔಟ್ ಆಗಿ 114 ರನ್ಗಳ ಗುರಿ ನೀಡಿತು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ರಹ್ಮನುಲ್ಲಾ ಗುರ್ಬಝ್ ಹಾಗೂ ವೆಂಕಟೇಶ್ ಐಯ್ಯರ್ ಜತೆಯಾಟದ ನೆರವಿನಿಂದ 10.3 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 114 ರನ್ ಕಲೆಹಾಕಿತು.
ಸನ್ ರೈಸರ್ಸ್ ಹೈದರಾಬಾದ್ ಇನ್ನಿಂಗ್ಸ್: ತಂಡ ಕೇವಲ 21 ರನ್ಗಳಿಗೆ ತನ್ನ ಮೊದಲ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿ ನಂತರ ಎಲ್ಲಿಯೂ ಹೇಳಿಕೊಳ್ಳುವಂತ ಸುಧಾರಣೆಯನ್ನು ಕಾಣಲೇ ಇಲ್ಲ. ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ 2 (5) ರನ್ ಮತ್ತು ಟ್ರಾವಿಸ್ ಹೆಡ್ ಡಕ್ಔಟ್ ಆದರು. ಇನ್ನುಳಿದಂತೆ ರಾಹುಲ್ ತ್ರಿಪಾಠಿ 9 (13) ರನ್, ಏಡನ್ ಮಾರ್ಕ್ರಮ್ 20 (23) ರನ್, ನಿತಿಶ್ ರೆಡ್ಡಿ 13 (10) ರನ್, ಹೆನ್ರಿಚ್ ಕ್ಲಾಸೆನ್ 16 (17) ರನ್, ಶಹಬಾಜ್ ಅಹ್ಮದ್ 8 (7) ರನ್, ಅಬ್ದುಲ್ ಸಮದ್ 4 (4) ರನ್, ನಾಯಕ ಪ್ಯಾಟ್ ಕಮಿನ್ಸ್ 24 (19) ರನ್, ಜಯದೇವ್ ಉನಾದ್ಕತ್ 4 (11) ರನ್ ಮತ್ತು ಭುವನೇಶ್ವರ್ ಕುಮಾರ್ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.
ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಂಡ್ರೆ ರಸೆಲ್ 3 ವಿಕೆಟ್, ಮಿಚೆಲ್ ಸ್ಟಾರ್ಕ್ ಮತ್ತು ಹರ್ಷಿತ್ ರಾಣಾ ತಲಾ ಎರಡೆರಡು ವಿಕೆಟ್, ವೈಭವ್ ಅರೋರಾ, ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ತಲಾ ಒಂದೊಂದು ವಿಕೆಟ್ ಪಡೆದರು.
ಕೊಲ್ಕತ್ತಾ ನೈಟ್ ರೈಡರ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಸುನಿಲ್ ನರೈನ್ ಹಾಗೂ ರಹ್ಮನುಲ್ಲಾ ಗುರ್ಬಝ್ ಕಣಕ್ಕಿಳಿದರು. ಸುನಿಲ್ ನರೈನ್ 6 (2) ರನ್ ಗಳಿಸಿ ಔಟ್ ಆದರೆ, ರಹ್ಮನುಲ್ಲಾ ಗುರ್ಬಝ್ 39 (32) ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅಬ್ಬರಿಸಿದ ವೆಂಕಟೇಶ್ ಐಯ್ಯರ್ 26 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸಹಿತ ಅಜೇಯ 52 ರನ್ ಬಾರಿಸಿದರು ಮತ್ತು ನಾಯಕ ಶ್ರೇಯಸ್ ಐಯ್ಯರ್ ಅಜೇಯ 6 (3) ರನ್ ಕಲೆಹಾಕಿದರು.
ಸನ್ರೈಸರ್ಸ್ ಹೈದರಾಬಾದ್ ಪರ ನಾಯಕ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಶಹಬಾಜ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು,
ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…
ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…
ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…
ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…
ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ…
ಮೈಸೂರು: ಬಾಲಿವುಡ್ನಿಂದ ಸ್ಯಾಂಡಲ್ವುಡ್ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್ ನಟರಿಗೆ ಕೊರಿಯೋಗ್ರಾಫರ್ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್…