ಕ್ರೀಡೆ

ಐಪಿಲ್‌ ಮಿನಿ ಹರಾಜು: 1,166 ಆಟಗಾರರ ಪೈಕಿ ಆಯ್ಕೆಯಾಗುವ 77 ಜನ ಅದೃಷ್ಟಶಾಲಿಗಳಾರು?

ನವದೆಹಲಿ :  2024 ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಗೂ ಮುನ್ನಾ ಆಟಗಾರರ ಮಿನಿ ಹರಾಜು ಡಿಸೆಂಬರ್ 19 ರಂದು ಮೊಟ್ಟ ಮೊದಲ ಬಾರಿಗೆ ದುಬೈ ನಲ್ಲಿ ನಡೆಯಲಿದೆ. ನವೆಂಬರ್ 30 ರವರೆಗೆ ಹರಾಜಿನಲ್ಲಿ ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ನೀಡಿತ್ತು. ಅದರಂತೆ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಹಂಚಿಕೊಂಡ ರಿಜಿಸ್ಟರ್‌ನಲ್ಲಿ ಒಟ್ಟು 1,166 ಆಟಗಾರರು ತಮ್ಮ-ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ.

ಈ ಬಾರಿ ವಿಶ್ವಕಪ್‌ ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಅನೇಕ ಆಟಗಾರರು ಸಹಾ ಐಪಿಎಲ್‌ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇವುಗಳಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್‌ ಸ್ಟಾರ್ಕ್‌, ಟ್ರಾವಿಸ್‌ ಹೆಡ್‌, ನ್ಯೂಜಿಲೆಂಡ್‌ನ ರಚಿನ್‌ ರವೀಂದ್ರ, ಡೇರಿಯಲ್‌ ಮಿಚೆಲ್‌ ಸೇರಿದಂತೆ ಹಲವಾರು ಆಟಗಾರರು ತಮ್ಮ ಹೆಸರನ್ನು ಸೇರಿಸಿದ್ದಾರೆ.

ಆಸೀಸ್‌ ವೇಗಿ ಮಿಚೆಲ್‌ ಸ್ಟಾರ್ಕ್‌ ಅವರು 2015ರ ಐಪಿಎಲ್‌ ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಈಗ ಮತ್ತೆ ಐಪಿಎಲ್‌ ನಲ್ಲಿ ಆಡುವ ಆಸಕ್ತಿಯೊಂದಿಗೆ ತಮ್ಮ ಹೆಸರನ್ನು ಸಹಾ ನೋಂದಾಯಿಸಿಕೊಂಡಿದ್ದಾರೆ.

1166 ಆಟಗಾರರ ಪೈಕಿ 77 ಸ್ಲಾಟ್‌ಗಳಿಗೆ ಆಯ್ಕೆಯಾಗಲಿರುವ ಅದೃಷ್ಟಶಾಲಿ ಆಟಗಾರರು ಯಾರು ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. 1,166 ಆಟಗಾರರ ಪೈಕಿ 830 ಭಾರತೀಯ ಆಟಗಾರರಿದ್ದರೆ, 336 ವಿದೇಶಿ ಆಟಗಾರರು ಇದ್ದಾರೆ. ಈ ಪಟ್ಟಿಯಲ್ಲಿ 212 ಕ್ಯಾಪ್ಡ್, 909 ಅನ್‌ಕ್ಯಾಪ್ಡ್ ಮತ್ತು 45 ಅಸೋಸಿಯೇಟ್ ದೇಶದ ಆಟಗಾರರು ಸೇರಿದ್ದಾರೆ. 77 ಸ್ಥಾನಗಳಿಗೆ, 47 ದೇಶಿ ಆಟಗಾರರು ಮತ್ತು ಗರಿಷ್ಠ 30 ವಿದೇಶಿ ಆಟಗಾರರನ್ನು ಬಿಡ್‌ ಮೂಲಕ ಪಡೆಯಬುದಾಗಿದೆ.

830 ಭಾರತೀಯ ಕ್ರಿಕೆಟಿಗರ ಪೈಕಿ ವರುಣ್ ಆರೋನ್, ಕೆಎಸ್ ಭರತ್, ಕೇದಾರ್ ಜಾಧವ್, ಸಿದ್ದಾರ್ಥ್ ಕೌಲ್, ಧವಳ್ ಕುಲಕರ್ಣಿ, ಶಿವಂ ಮಾವಿ, ಶಹಬಾಜ್ ನದೀಮ್, ಕರುಣ್ ನಾಯರ್, ಮನೀಶ್ ಪಾಂಡೆ, ಹರ್ಷಲ್ ಪಟೇಲ್, ಚೇತನ್ ಸಕರಿಯಾ, ಮನ್ದೀಪ್ ಸಿಂಗ್, ಬರೀಂದರ್ ಸ್ರಾನ್ ಇದ್ದರೆ, ಇವರ ಜೊತೆಗೆ ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಹನುಮ ವಿಹಾರಿ, ಸಂದೀಪ್ ವಾರಿಯರ್ ಮತ್ತು ಉಮೇಶ್ ಯಾದವ್ ಕೂಡಾ ಹರಾಜಿನಲ್ಲಿ ಅದೃಷ್ಟ ಪರೀಕ್ಷೆ ಎದುರಿಸಲಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಿದ ಭಾರತೀಯರ ಪೈಕಿ ಹರ್ಷಲ್ ಪಟೇಲ್, ಕೇದಾರ್ ಜಾಧವ್, ಶಾರ್ದುಲ್ ಠಾಕೂರ್ ಮತ್ತು ಉಮೇಶ್ ಯಾದವ್ ಕೇವಲ ನಾಲ್ವರು ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ. ಹಾಗೂ ಉಳಿದ 14 ಮಂದಿ ತಮ್ಮ ಬಿಡ್ಡಿಂಗ್ ಅನ್ನು 50 ಲಕ್ಷದಿಂದ ಪ್ರಾರಂಭಿಸಲಿದ್ದಾರೆ. ಹರಾಜಿನಲ್ಲಿ ಸೇರಿಸಲು ಬಯಸುವ ಆಟಗಾರರ ಪಟ್ಟಿಯೊಂದಿಗೆ ರಿಜಿಸ್ಟರ್‌ಗೆ ಪ್ರತಿಕ್ರಿಯಿಸುವಂತೆ ಫ್ರಾಂಚೈಸಿಗಳಿಗೆ ಬಿಸಿಸಿಐ ಸೂಚನೆ ನೀಡಿದೆ.

ಲೈವ್‌:
ಸ್ಟಾರ್ ಸ್ಪೋರ್ಟ್ಸ್: ಭಾರತೀಯ ಕಾಲಮಾನ ಮಧ್ಯಾಹ್ನ 1 ಗಂಟೆ.
ಆನ್‌ಲೈನ್ ಲೈವ್ ಸ್ಟ್ರೀಮಿಂಗ್‌: JioCinema

andolanait

Recent Posts

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

35 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

1 hour ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

1 hour ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

2 hours ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

2 hours ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

2 hours ago