ಕ್ರೀಡೆ

IPL Mock Auction: ಆರ್‌ಸಿಬಿ ಪಾಲಾದ ಮಿಚೆಲ್‌ ಸ್ಟಾರ್ಕ್‌!

ಮುಂಬೈ: ಬಹುನಿರೀಕ್ಷಿತ 2024ರ ಐಪಿಎಲ್‌ ಹರಾಜು ಪ್ರಕ್ರಿಯೆ ಮಂಗಳವಾರ (ಡಿ.19) ದುಬೈನಲ್ಲಿ ನಡೆಯಲಿದೆ. ಮಧ್ಯಾಹ್ನ 2.30 ಗಂಟೆಗೆ ಹರಾಜು ಪ್ರಕ್ರಿಯೆ ಪ್ರಾರಂಭವಾಗಲಿದೆ.

ಅದಕ್ಕೂ ಮುನ್ನಾ ಜಿಯೋ ಸಿನಿಮಾದಲ್ಲಿ ಇಂದು ಅಣಕು ಹರಾಜು ನಡೆಯಿತು.  ಈ ಹರಾಜಿನಲ್ಲಿ ಆರ್‌ಸಿಬಿ ತಂಡ ಮಿಚೆಲ್‌ಸ್ಟಾರ್ಕ್‌ ಅವರನ್ನು ಖರೀದಿಸಿದೆ.

ಈ ಹರಾಜಿಗೆ ಆರ್‌ಸಿಬಿ ಫ್ರಾಂಚೈಸಿ ಮಾಜಿ ನಿರ್ದೇಶಕ ಮೈಕ್ ಹಸ್ಸಿ ಆರ್ ಸಿಬಿ ತಂಡವನ್ನು ಪ್ರತಿನಿಧಿಸಿದರೆ, ಸುರೇಶ್ ರೈನಾ ಸಿಎಸ್‌ಕೆ, ಇಯಾನ್ ಮೋರ್ಗನ್ ಸನ್‌ರೈಸಸ್‌ ಹೈದರಾಬಾದ್, ಪಾರ್ಥೀವ್ ಪಟೇಲ್ ಗುಜರಾತ್ ಟೈಟನ್ಸ್, ರಾಬಿನ್ ಉತ್ತಪ್ಪ ಕೆಕೆಆರ್ ತಂಡವನ್ನು ಪ್ರತಿನಿಧಿಸಿದರು. ಆಕಾಶ್ ಚೋಪ್ರಾ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರತಿನಿಧಿಯಾಗಿ, ಅನಿಲ್ ಕುಂಬ್ಳೆ ಮುಂಬೈ ಇಂಡಿಯನ್ಸ್ ತಂಡದ ಪ್ರತಿನಿಧಿಯಾಗಿ ಅಣಕು ಹರಾಜಿನಲ್ಲಿ ಭಾಗವಹಿಸಿದ್ದರು.

ಈ ಹರಾಜಿನಲ್ಲಿ ಆಸೀಸ್‌ ವೇಗಿ ಮಿಚೆಲ್‌ ಸ್ಟಾರ್ಕ್‌ ಬರೋಬ್ಬರಿ 18.5 ಕೋಟಿಗೆ ಆರ್‌ಸಿಬಿ ಪಾಲಾದರು. ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಗೆರಾಲ್ಡ್ ಕೊಯೆಟ್ಜೆ ಅವರನ್ನು ಗುಜರಾತ್ ಟೈಟನ್ಸ್ ತಂಡದ ಪ್ರತಿನಿಧಿ ಪಾರ್ಥೀವ್ ಪಟೇಲ್ 18 ಕೋಟಿ ರೂಪಾಯಿಗೆ ಬಿಡ್ ಮಾಡುವ ಮೂಲಕ ತಂಡಕ್ಕೆ ಸೇರ್ಪಡೆಯಾದರು. ಇನ್ನು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ 17.50 ಕೋಟಿ ರೂಪಾಯಿಗೆ ಹರಾಜಾದರು.

ಆಲ್‌ರೌಂಡರ್ ಶಾರ್ದೂಲ್ ಠಾಕೂರ್ 14 ಕೋಟಿ ರೂಪಾಯಿಗೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾದರು. ಶ್ರೀಲಂಕಾದ ವೇಗದ ಬೌಲರ್ ದಿಲ್ಷನ್ ಮಧುಶಂಕ 10.50 ಕೋಟಿ ರೂಪಾಯಿಗೆ ಕೆಕೆಆರ್ ತಂಡಕ್ಕೆ ಸೇರಿದರು. ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ 9.50 ಕೋಟಿ ರೂಪಾಯಿಗೆ ಗುಜರಾತ್ ಟೈಟನ್ಸ್ ತಂಡವನ್ನು ಸೇರಿದರೆ, ಶ್ರೀಲಂಕಾ ಆಲ್‌ರೌಂಡರ್ ವನಿಂದು ಹಸರಂಗ 8.50 ಕೋಟಿ ರೂಪಾಯಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿದರು.

ಇದು ಕೇವಲ ಅಣಕು ಹರಾಜಾಗಿದ್ದು ಮಾಜಿ ಕ್ರಿಕೆಟಿಗರು ಇದರಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಿದ್ದಲ್ಲದೆ, ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಡಿಸೆಂಬರ್‌ 19 ರಂದು ಯಾವೆಲ್ಲಾ ಆಟಗಾರರಿಗೆ ಮನ್ನಣೆ ದೊರೆಲಿದೆ, ಇತ್ಯಾದಿ ಅಂಶಗಳ ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

andolanait

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

3 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

3 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

3 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

4 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

4 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

5 hours ago