ಮುಂಬೈ: ಬಹುನಿರೀಕ್ಷಿತ 2024ರ ಐಪಿಎಲ್ ಹರಾಜು ಪ್ರಕ್ರಿಯೆ ಮಂಗಳವಾರ (ಡಿ.19) ದುಬೈನಲ್ಲಿ ನಡೆಯಲಿದೆ. ಮಧ್ಯಾಹ್ನ 2.30 ಗಂಟೆಗೆ ಹರಾಜು ಪ್ರಕ್ರಿಯೆ ಪ್ರಾರಂಭವಾಗಲಿದೆ.
ಅದಕ್ಕೂ ಮುನ್ನಾ ಜಿಯೋ ಸಿನಿಮಾದಲ್ಲಿ ಇಂದು ಅಣಕು ಹರಾಜು ನಡೆಯಿತು. ಈ ಹರಾಜಿನಲ್ಲಿ ಆರ್ಸಿಬಿ ತಂಡ ಮಿಚೆಲ್ಸ್ಟಾರ್ಕ್ ಅವರನ್ನು ಖರೀದಿಸಿದೆ.
ಈ ಹರಾಜಿಗೆ ಆರ್ಸಿಬಿ ಫ್ರಾಂಚೈಸಿ ಮಾಜಿ ನಿರ್ದೇಶಕ ಮೈಕ್ ಹಸ್ಸಿ ಆರ್ ಸಿಬಿ ತಂಡವನ್ನು ಪ್ರತಿನಿಧಿಸಿದರೆ, ಸುರೇಶ್ ರೈನಾ ಸಿಎಸ್ಕೆ, ಇಯಾನ್ ಮೋರ್ಗನ್ ಸನ್ರೈಸಸ್ ಹೈದರಾಬಾದ್, ಪಾರ್ಥೀವ್ ಪಟೇಲ್ ಗುಜರಾತ್ ಟೈಟನ್ಸ್, ರಾಬಿನ್ ಉತ್ತಪ್ಪ ಕೆಕೆಆರ್ ತಂಡವನ್ನು ಪ್ರತಿನಿಧಿಸಿದರು. ಆಕಾಶ್ ಚೋಪ್ರಾ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರತಿನಿಧಿಯಾಗಿ, ಅನಿಲ್ ಕುಂಬ್ಳೆ ಮುಂಬೈ ಇಂಡಿಯನ್ಸ್ ತಂಡದ ಪ್ರತಿನಿಧಿಯಾಗಿ ಅಣಕು ಹರಾಜಿನಲ್ಲಿ ಭಾಗವಹಿಸಿದ್ದರು.
ಈ ಹರಾಜಿನಲ್ಲಿ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಬರೋಬ್ಬರಿ 18.5 ಕೋಟಿಗೆ ಆರ್ಸಿಬಿ ಪಾಲಾದರು. ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಗೆರಾಲ್ಡ್ ಕೊಯೆಟ್ಜೆ ಅವರನ್ನು ಗುಜರಾತ್ ಟೈಟನ್ಸ್ ತಂಡದ ಪ್ರತಿನಿಧಿ ಪಾರ್ಥೀವ್ ಪಟೇಲ್ 18 ಕೋಟಿ ರೂಪಾಯಿಗೆ ಬಿಡ್ ಮಾಡುವ ಮೂಲಕ ತಂಡಕ್ಕೆ ಸೇರ್ಪಡೆಯಾದರು. ಇನ್ನು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ಸನ್ರೈಸರ್ಸ್ ಹೈದರಾಬಾದ್ ತಂಡ 17.50 ಕೋಟಿ ರೂಪಾಯಿಗೆ ಹರಾಜಾದರು.
ಆಲ್ರೌಂಡರ್ ಶಾರ್ದೂಲ್ ಠಾಕೂರ್ 14 ಕೋಟಿ ರೂಪಾಯಿಗೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾದರು. ಶ್ರೀಲಂಕಾದ ವೇಗದ ಬೌಲರ್ ದಿಲ್ಷನ್ ಮಧುಶಂಕ 10.50 ಕೋಟಿ ರೂಪಾಯಿಗೆ ಕೆಕೆಆರ್ ತಂಡಕ್ಕೆ ಸೇರಿದರು. ಇಂಗ್ಲೆಂಡ್ನ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ 9.50 ಕೋಟಿ ರೂಪಾಯಿಗೆ ಗುಜರಾತ್ ಟೈಟನ್ಸ್ ತಂಡವನ್ನು ಸೇರಿದರೆ, ಶ್ರೀಲಂಕಾ ಆಲ್ರೌಂಡರ್ ವನಿಂದು ಹಸರಂಗ 8.50 ಕೋಟಿ ರೂಪಾಯಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿದರು.
ಇದು ಕೇವಲ ಅಣಕು ಹರಾಜಾಗಿದ್ದು ಮಾಜಿ ಕ್ರಿಕೆಟಿಗರು ಇದರಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಿದ್ದಲ್ಲದೆ, ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಡಿಸೆಂಬರ್ 19 ರಂದು ಯಾವೆಲ್ಲಾ ಆಟಗಾರರಿಗೆ ಮನ್ನಣೆ ದೊರೆಲಿದೆ, ಇತ್ಯಾದಿ ಅಂಶಗಳ ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…