ಕ್ರೀಡೆ

IPL Mock Auction: ಆರ್‌ಸಿಬಿ ಪಾಲಾದ ಮಿಚೆಲ್‌ ಸ್ಟಾರ್ಕ್‌!

ಮುಂಬೈ: ಬಹುನಿರೀಕ್ಷಿತ 2024ರ ಐಪಿಎಲ್‌ ಹರಾಜು ಪ್ರಕ್ರಿಯೆ ಮಂಗಳವಾರ (ಡಿ.19) ದುಬೈನಲ್ಲಿ ನಡೆಯಲಿದೆ. ಮಧ್ಯಾಹ್ನ 2.30 ಗಂಟೆಗೆ ಹರಾಜು ಪ್ರಕ್ರಿಯೆ ಪ್ರಾರಂಭವಾಗಲಿದೆ.

ಅದಕ್ಕೂ ಮುನ್ನಾ ಜಿಯೋ ಸಿನಿಮಾದಲ್ಲಿ ಇಂದು ಅಣಕು ಹರಾಜು ನಡೆಯಿತು.  ಈ ಹರಾಜಿನಲ್ಲಿ ಆರ್‌ಸಿಬಿ ತಂಡ ಮಿಚೆಲ್‌ಸ್ಟಾರ್ಕ್‌ ಅವರನ್ನು ಖರೀದಿಸಿದೆ.

ಈ ಹರಾಜಿಗೆ ಆರ್‌ಸಿಬಿ ಫ್ರಾಂಚೈಸಿ ಮಾಜಿ ನಿರ್ದೇಶಕ ಮೈಕ್ ಹಸ್ಸಿ ಆರ್ ಸಿಬಿ ತಂಡವನ್ನು ಪ್ರತಿನಿಧಿಸಿದರೆ, ಸುರೇಶ್ ರೈನಾ ಸಿಎಸ್‌ಕೆ, ಇಯಾನ್ ಮೋರ್ಗನ್ ಸನ್‌ರೈಸಸ್‌ ಹೈದರಾಬಾದ್, ಪಾರ್ಥೀವ್ ಪಟೇಲ್ ಗುಜರಾತ್ ಟೈಟನ್ಸ್, ರಾಬಿನ್ ಉತ್ತಪ್ಪ ಕೆಕೆಆರ್ ತಂಡವನ್ನು ಪ್ರತಿನಿಧಿಸಿದರು. ಆಕಾಶ್ ಚೋಪ್ರಾ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರತಿನಿಧಿಯಾಗಿ, ಅನಿಲ್ ಕುಂಬ್ಳೆ ಮುಂಬೈ ಇಂಡಿಯನ್ಸ್ ತಂಡದ ಪ್ರತಿನಿಧಿಯಾಗಿ ಅಣಕು ಹರಾಜಿನಲ್ಲಿ ಭಾಗವಹಿಸಿದ್ದರು.

ಈ ಹರಾಜಿನಲ್ಲಿ ಆಸೀಸ್‌ ವೇಗಿ ಮಿಚೆಲ್‌ ಸ್ಟಾರ್ಕ್‌ ಬರೋಬ್ಬರಿ 18.5 ಕೋಟಿಗೆ ಆರ್‌ಸಿಬಿ ಪಾಲಾದರು. ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಗೆರಾಲ್ಡ್ ಕೊಯೆಟ್ಜೆ ಅವರನ್ನು ಗುಜರಾತ್ ಟೈಟನ್ಸ್ ತಂಡದ ಪ್ರತಿನಿಧಿ ಪಾರ್ಥೀವ್ ಪಟೇಲ್ 18 ಕೋಟಿ ರೂಪಾಯಿಗೆ ಬಿಡ್ ಮಾಡುವ ಮೂಲಕ ತಂಡಕ್ಕೆ ಸೇರ್ಪಡೆಯಾದರು. ಇನ್ನು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ 17.50 ಕೋಟಿ ರೂಪಾಯಿಗೆ ಹರಾಜಾದರು.

ಆಲ್‌ರೌಂಡರ್ ಶಾರ್ದೂಲ್ ಠಾಕೂರ್ 14 ಕೋಟಿ ರೂಪಾಯಿಗೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾದರು. ಶ್ರೀಲಂಕಾದ ವೇಗದ ಬೌಲರ್ ದಿಲ್ಷನ್ ಮಧುಶಂಕ 10.50 ಕೋಟಿ ರೂಪಾಯಿಗೆ ಕೆಕೆಆರ್ ತಂಡಕ್ಕೆ ಸೇರಿದರು. ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ 9.50 ಕೋಟಿ ರೂಪಾಯಿಗೆ ಗುಜರಾತ್ ಟೈಟನ್ಸ್ ತಂಡವನ್ನು ಸೇರಿದರೆ, ಶ್ರೀಲಂಕಾ ಆಲ್‌ರೌಂಡರ್ ವನಿಂದು ಹಸರಂಗ 8.50 ಕೋಟಿ ರೂಪಾಯಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿದರು.

ಇದು ಕೇವಲ ಅಣಕು ಹರಾಜಾಗಿದ್ದು ಮಾಜಿ ಕ್ರಿಕೆಟಿಗರು ಇದರಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಿದ್ದಲ್ಲದೆ, ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಡಿಸೆಂಬರ್‌ 19 ರಂದು ಯಾವೆಲ್ಲಾ ಆಟಗಾರರಿಗೆ ಮನ್ನಣೆ ದೊರೆಲಿದೆ, ಇತ್ಯಾದಿ ಅಂಶಗಳ ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

andolanait

Recent Posts

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

1 hour ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

6 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

7 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

15 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

18 hours ago