ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯುವ ಸಂಭವವಿದೆ.
ಒಂದು ಕಡೆ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.
ಮತ್ತೊಂದು ಕಡೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ) ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ನಡುವೆ ಉಂಟಾಗಿರುವ ಸಂಘರ್ಷ ಇನ್ನು ಮುಗಿದಿಲ್ಲ. ಈ ಬೆಳವಣಿಗೆಗಳ ನಡುವೆಯೇ ಈ ಬಾರಿಯ ಉದ್ಘಾಟನಾ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಸಿದ್ದತೆಗಳು ಆರಂಭವಾಗಿದೆ.
2026ನೇ ಸರಣಿಯ ಐಪಿಎಲ್ ಉದ್ಘಾಟನಾ ಪಂದ್ಯ ಈ ಬಾರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.26ರಂದು ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.
ಉದ್ಘಾಟನಾ ಪಂದ್ಯಕ್ಕಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಕ್ರಿಕೆಟ್ ಮೈದಾನದ ಕಾಮಗಾರಿಯ ವೇಗವನ್ನು ಹೆಚ್ಚಿಸಲಾಗಿದೆ. ಕಾಲ್ತುಳಿತ ದುರಂತ ನಡೆದು ಸಾವು ಆದ ಜಾಗದಲ್ಲಿ ಗೋಡೆ ಒಡೆದು, ಎಂಟ್ರಿ ಎಕ್ಸಿಟ್ಗೆ ವಿಶಾಲವಾದ ಜಾಗದ ವ್ಯವಸ್ಥೆ ಮಾಡಲಾಗುತ್ತಿದೆ.
ಕಾಲ್ತುಳಿತ ದುರಂತದ ಬಳಿಕ ಮುಚ್ಚಲಾಗಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.
ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಚಿನ್ನಸ್ವಾಮಿಯಲ್ಲಿಯೇ ನಡೆಯುವ ಸಾಧ್ಯತೆಗಳಿದ್ದು, ಅದಕ್ಕಾಗಿ ಆರ್ಸಿಬಿ ಆಡಳಿತ ಮಂಡಳಿ, ಕೆಎಸ್ಸಿಎ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಇತ್ತ ನಾಲ್ಕುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಆರ್ಸಿಬಿ ಆಡಳಿತ ಮಂಡಳಿ ಎಐ ಕ್ಯಾಮರಾ ಅಳವಡಿಕೆ ಮಾಡಿ, ಜನ ದಟ್ಟಣೆಯಾಗದಂತೆ ಆಡಳಿತ ಮಂಡಳಿಯಿಂದಲೇ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಮುಂದಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…