ಕ್ರೀಡೆ

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯುವ ಸಂಭವವಿದೆ.

ಒಂದು ಕಡೆ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.

ಮತ್ತೊಂದು ಕಡೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‍ಸಿಎ) ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ನಡುವೆ ಉಂಟಾಗಿರುವ ಸಂಘರ್ಷ ಇನ್ನು ಮುಗಿದಿಲ್ಲ. ಈ ಬೆಳವಣಿಗೆಗಳ ನಡುವೆಯೇ ಈ ಬಾರಿಯ ಉದ್ಘಾಟನಾ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಸಿದ್ದತೆಗಳು ಆರಂಭವಾಗಿದೆ. ‌

2026ನೇ ಸರಣಿಯ ಐಪಿಎಲ್ ಉದ್ಘಾಟನಾ ಪಂದ್ಯ ಈ ಬಾರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.26ರಂದು ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.

ಉದ್ಘಾಟನಾ ಪಂದ್ಯಕ್ಕಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಕ್ರಿಕೆಟ್ ಮೈದಾನದ ಕಾಮಗಾರಿಯ ವೇಗವನ್ನು ಹೆಚ್ಚಿಸಲಾಗಿದೆ. ಕಾಲ್ತುಳಿತ ದುರಂತ ನಡೆದು ಸಾವು ಆದ ಜಾಗದಲ್ಲಿ ಗೋಡೆ ಒಡೆದು, ಎಂಟ್ರಿ ಎಕ್ಸಿಟ್‍ಗೆ ವಿಶಾಲವಾದ ಜಾಗದ ವ್ಯವಸ್ಥೆ ಮಾಡಲಾಗುತ್ತಿದೆ.

ಕಾಲ್ತುಳಿತ ದುರಂತದ ಬಳಿಕ ಮುಚ್ಚಲಾಗಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.

ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಚಿನ್ನಸ್ವಾಮಿಯಲ್ಲಿಯೇ ನಡೆಯುವ ಸಾಧ್ಯತೆಗಳಿದ್ದು, ಅದಕ್ಕಾಗಿ ಆರ್‌ಸಿಬಿ ಆಡಳಿತ ಮಂಡಳಿ, ಕೆಎಸ್‍ಸಿಎ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇತ್ತ ನಾಲ್ಕುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಆರ್‌ಸಿಬಿ ಆಡಳಿತ ಮಂಡಳಿ ಎಐ ಕ್ಯಾಮರಾ ಅಳವಡಿಕೆ ಮಾಡಿ, ಜನ ದಟ್ಟಣೆಯಾಗದಂತೆ ಆಡಳಿತ ಮಂಡಳಿಯಿಂದಲೇ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಮುಂದಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

29 mins ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

58 mins ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

1 hour ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

1 hour ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

7 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

7 hours ago