ಮೊಹಾಲಿ: ಮೊಹಾಲಿಯಲ್ಲಿ ಶನಿವಾರ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಪಂಜಾಬ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯಕ್ಕೆ ಮಳೆ ಕಾಡಿತು. ವರ್ಷಧಾರೆಯಿಂದಾಗಿ ಎರಡನೇ ಇನ್ನಿಂಗ್ಸ್ನ 16ನೇ ಓವರ್ನಲ್ಲಿ ನಿಂತು ಹೋದ ಪಂದ್ಯದ ಫಲಿತಾಂಶವನ್ನು ಡಕ್ವರ್ತ್ ಲೂಯಿಸ್ ನಿಯಮದ ಅನುಸಾರ ಪ್ರಕಟಿಸಲಾಗಿದ್ದು, ಪಂಜಾಬ್ ಏಳು ರನ್ಗಳಿಂದ ಗೆದ್ದಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಶ್ರೀಲಂಕಾದ ಭಾನುಕಾ ರಾಜಪಕ್ಸೆ ಅವರ ಅರ್ಧಶತಕದ ನೆರವಿನಿಂದ, 20 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 191ರನ್ ಗಳಿಸಿತ್ತು.
ಇದಕ್ಕೆ ಉತ್ತರವಾಗಿ ಕೆಕೆಆರ್ 16 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತು. ಈ ವೇಳೆ ಸುರಿದ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತ್ತು.
ತೀವ್ರ ಮಳೆಯಿಂದಾಗಿ ಪಂದ್ಯದ ಫಲಿತಾಂಶವನ್ನು ಡಕ್ವರ್ತ್ ಲೂಯಿಸ್ ನಿಯಮದ ಅಡಿ ಪ್ರಕಟಿಸಲಾಯಿತು. ಅದರಂತೆ ಕೆಕೆಆರ್ಗೆ 7ರನ್ಗಳ ಸೋಲು ಕಂಡಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…