ಕ್ರೀಡೆ

IPL: ಮಳೆ ಕಾಡಿದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಪಂಜಾಬ್‌ಗೆ ಗೆಲುವು

ಮೊಹಾಲಿ: ಮೊಹಾಲಿಯಲ್ಲಿ ಶನಿವಾರ ಕೋಲ್ಕತ್ತ ನೈಟ್‌ ರೈಡರ್ಸ್‌ (ಕೆಕೆಆರ್‌) ಮತ್ತು ಪಂಜಾಬ್‌ ಕಿಂಗ್ಸ್‌ ತಂಡದ ನಡುವೆ ನಡೆದ ಪಂದ್ಯಕ್ಕೆ ಮಳೆ ಕಾಡಿತು. ವರ್ಷಧಾರೆಯಿಂದಾಗಿ ಎರಡನೇ ಇನ್ನಿಂಗ್ಸ್‌ನ 16ನೇ ಓವರ್‌ನಲ್ಲಿ ನಿಂತು ಹೋದ ಪಂದ್ಯದ ಫಲಿತಾಂಶವನ್ನು ಡಕ್ವರ್ತ್‌ ಲೂಯಿಸ್‌ ನಿಯಮದ ಅನುಸಾರ ಪ್ರಕಟಿಸಲಾಗಿದ್ದು, ಪಂಜಾಬ್‌ ಏಳು ರನ್‌ಗಳಿಂದ ಗೆದ್ದಿದೆ.

ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಶ್ರೀಲಂಕಾದ ಭಾನುಕಾ ರಾಜಪಕ್ಸೆ ಅವರ ಅರ್ಧಶತಕದ ನೆರವಿನಿಂದ, 20 ಓವರ್‌ಗಳಲ್ಲಿ ಐದು ವಿಕೆಟ್‌ ನಷ್ಟಕ್ಕೆ 191ರನ್‌ ಗಳಿಸಿತ್ತು.

ಇದಕ್ಕೆ ಉತ್ತರವಾಗಿ ಕೆಕೆಆರ್ 16 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 146 ರನ್ ಗಳಿಸಿತು. ಈ ವೇಳೆ ಸುರಿದ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತ್ತು.

ತೀವ್ರ ಮಳೆಯಿಂದಾಗಿ ಪಂದ್ಯದ ಫಲಿತಾಂಶವನ್ನು ಡಕ್ವರ್ತ್‌ ಲೂಯಿಸ್‌ ನಿಯಮದ ಅಡಿ ಪ್ರಕಟಿಸಲಾಯಿತು. ಅದರಂತೆ ಕೆಕೆಆರ್‌ಗೆ 7ರನ್‌ಗಳ ಸೋಲು ಕಂಡಿದೆ.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago