ಕ್ರೀಡೆ

IPL: ಮಳೆ ಕಾಡಿದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಪಂಜಾಬ್‌ಗೆ ಗೆಲುವು

ಮೊಹಾಲಿ: ಮೊಹಾಲಿಯಲ್ಲಿ ಶನಿವಾರ ಕೋಲ್ಕತ್ತ ನೈಟ್‌ ರೈಡರ್ಸ್‌ (ಕೆಕೆಆರ್‌) ಮತ್ತು ಪಂಜಾಬ್‌ ಕಿಂಗ್ಸ್‌ ತಂಡದ ನಡುವೆ ನಡೆದ ಪಂದ್ಯಕ್ಕೆ ಮಳೆ ಕಾಡಿತು. ವರ್ಷಧಾರೆಯಿಂದಾಗಿ ಎರಡನೇ ಇನ್ನಿಂಗ್ಸ್‌ನ 16ನೇ ಓವರ್‌ನಲ್ಲಿ ನಿಂತು ಹೋದ ಪಂದ್ಯದ ಫಲಿತಾಂಶವನ್ನು ಡಕ್ವರ್ತ್‌ ಲೂಯಿಸ್‌ ನಿಯಮದ ಅನುಸಾರ ಪ್ರಕಟಿಸಲಾಗಿದ್ದು, ಪಂಜಾಬ್‌ ಏಳು ರನ್‌ಗಳಿಂದ ಗೆದ್ದಿದೆ.

ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಶ್ರೀಲಂಕಾದ ಭಾನುಕಾ ರಾಜಪಕ್ಸೆ ಅವರ ಅರ್ಧಶತಕದ ನೆರವಿನಿಂದ, 20 ಓವರ್‌ಗಳಲ್ಲಿ ಐದು ವಿಕೆಟ್‌ ನಷ್ಟಕ್ಕೆ 191ರನ್‌ ಗಳಿಸಿತ್ತು.

ಇದಕ್ಕೆ ಉತ್ತರವಾಗಿ ಕೆಕೆಆರ್ 16 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 146 ರನ್ ಗಳಿಸಿತು. ಈ ವೇಳೆ ಸುರಿದ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತ್ತು.

ತೀವ್ರ ಮಳೆಯಿಂದಾಗಿ ಪಂದ್ಯದ ಫಲಿತಾಂಶವನ್ನು ಡಕ್ವರ್ತ್‌ ಲೂಯಿಸ್‌ ನಿಯಮದ ಅಡಿ ಪ್ರಕಟಿಸಲಾಯಿತು. ಅದರಂತೆ ಕೆಕೆಆರ್‌ಗೆ 7ರನ್‌ಗಳ ಸೋಲು ಕಂಡಿದೆ.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago