ಕ್ರೀಡೆ

IPL Retention 2024: ಸೀಸನ್‌-17 ನಲ್ಲಿ ಆಡಲಿದ್ದಾರಾ ಧೋನಿ?: ಸ್ಟೋಕ್ಸ್‌ಗೆ ಕೋಕ್‌ ಕೊಟ್ಟ ಸಿಎಸ್‌ಕೆ

2024 ರ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು (ನವೆಂಬರ್ 26) ಸಂಜೆ 4 ಗಂಟೆಯೇ ಡೆಡ್‌ಲೈನ್ ಆಗಿತ್ತು.

ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಚೆನ್ನೈ ಸೂಪರ್‌ ಕಿಂಗ್ಸ್‌ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಉಳಿಸಿಕೊಂಡ ಆಟಗಾರರು : ನಾಯಕ ಮಹೇಂದ್ರ ಸಿಂಗ್‌ ಧೋನಿ, ಋತುರಾಜ್‌ ಗಾಯಕ್ವಾಡ್‌, ಡೆವೋನ್‌ ಕಾನ್ವೆ, ದೀಪಕ್‌ ಚಾಹರ್‌, ತುಷಾರ್‌ ದೇಶ್‌ಪಾಂಡೆ, ಮಹೀಶಾ ತೀಕ್ಷಣ, ಸಿಮ್ರನ್‌ಜಿತ್‌ ಸಿಂಗ್‌, ಮತೀಶ ಪತಿರಣ, ಪ್ರಶಾಂತ್‌ ಸೋಲಂಕಿ, ಮಿಚೆಲ್‌ ಸ್ಯಾಂಟ್ನರ್‌, ಹಂಗ್ರೇಕರ್‌, ರವೀಂದ್ರ ಜಡೇಜಾ, ಮೋಯಿನ್‌ ಅಲಿ, ಶಿವಂ ದುಬೆ, ಅಜಿಂಕ್ಯಾ ರಹಾನೆ, ನಿಶಾಂತ್‌ ಸಿಂಧು, ಶೇಕ್‌ ರಶೀದ್‌, ಅಜಯ್‌ ಮಂಡಲ್‌, ಮುಖೇಶ್‌ ಚೌಧರಿ

ಬಿಡುಗಡೆಗೊಂಡ ಆಟಗಾರರು : ಬೆನ್‌ ಸ್ಟೋಕ್ಸ್‌, ಡ್ವೇನ್‌ ಪ್ರಿಟೋರಿಯಸ್‌, ಭಗತ್‌ ವರ್ಮಾ, ಸೇನಾಪತಿ, ಆಕಾಶ್‌ ಸಿಂಗ್‌, ಕೈಲ್‌ ಜಾಮಿಂನ್ಸನ್‌, ಮಲಗ, ಅಂಬಾಟಿ ರಾಯುಡು.

2023 ರಲ್ಲಿನ ಐಪಿಎಲ್‌ ನಲ್ಲಿ ನೀರಸ ಪ್ರದರ್ಶನ ತೋರಿದ್ದ ಬೆನ್‌ ಸ್ಟೋಕ್ಸ್‌ ಸಿಎಸ್‌ಕೆ ಪ್ರಾಂಚೈಸಿಯಿಂದ ಬಿಡುಗಡೆಗೊಂಡಿದ್ದಾರೆ. ಈ ಬಗ್ಗೆ ಸ್ಟೋಕ್ಸ್‌ ಮಾತನಾಡಿದ್ದು, ಮುಂದಿನ ವರ್ಷದ ಹೆವಿ ವರ್ಕ್‌ ಲೋಡ್‌ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಭಾರತ ಹಾಗೂ ಇಂಗ್ಲೆಂಡ್‌ ನಡುವೆ 5 ಟೆಸ್ಟ್‌ ಪಂದ್ಯಗಳು ನಡೆಯಲಿವೆ. ನಂತರ ಜೂನ್‌ ತಿಂಗಳಿನಲ್ಲಿ ಟಿ-20 ವರ್ಲ್ಡ್‌ ಕಪ್‌ ಇರುವುದರಿಂದ ಐಪಿಎಲ್‌ ನಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

11 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

15 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

15 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

16 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

17 hours ago