2024 ರ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು (ನವೆಂಬರ್ 26) ಸಂಜೆ 4 ಗಂಟೆಯೇ ಡೆಡ್ಲೈನ್ ಆಗಿತ್ತು.
ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಉಳಿಸಿಕೊಂಡ ಆಟಗಾರರು : ಕೆ.ಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ದೇವ್ದತ್ ಪಡಿಕ್ಕಲ್, ರವಿ ಬಿಷ್ನೋಯಿ, ನವೀನ್ ಹುಲ್ ಹಕ್, ಕೃನಾಲ್ ಪಾಂಡ್ಯ, ಯುದ್ವೀರ್ ಸಿಂಗ್, ಪ್ರೇರಕ್, ಯಶ್ ಠಾಕೂರ್, ಮರ್ಕ್ ವುಡ್, ಮಾಯಾಂಕ್ ಯಾದವ್, ಮೋಸಿನ್ ಖಾನ್,
ಬಿಡುಗಡೆಗೊಂಡ ಆಟಗಾರರು : ಜೈದೇವ್ ಉನಾದ್ಕಟ್, ಡೇನಿಯಲ್ ಸ್ಯಾಮ್ಸ್, ಮನನ್ ವೊಹ್ರಾ, ಸ್ವಾಪ್ನಿಲ್ ಸಿಂಗ್, ಕರಣ್ ಶರ್ಮಾ, ಅರ್ಪ್ರಿತ್ ಗುಲೇರಿಯಾ, ಸುಯೇಶ್, ಕರುಣ್ ನಾಯರ್,
ರಾಜಸ್ತಾನ್ ರಾಯಲ್ಸ್ನ ಎಡಗೈ ಬ್ಯಾಟರ್ ದೇವ್ದತ್ ಪಡಿಕ್ಕಲ್ ಅವರನ್ನು ಬದಲಿ ಆಟಗಾರರ ಪೈಕಿ ಎಲ್ಎಸ್ಜಿ ತಂಡ ಆವೆಶ್ ಖಾನ್ ಅವರನ್ನು ರಾಜಸ್ತಾನ್ಗೆ ಬಿಟ್ಟುಕೊಟ್ಟು ಪರಸ್ಪರ ವಿನಿಮಯ ಮಾಡಿಕೊಂಡಿದ್ದಾರೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…