ಕ್ರೀಡೆ

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌

ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ ಇಂದಿನಿಂದ ಆರಂಭವಾಗುತ್ತಿದೆ. ಬೆಂಗಳೂರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಉದ್ಘಾಟನಾ ಪಂದ್ಯ ನಡೆಯಲಿದೆ.

ಬೆಂಗಳೂರಿನಲ್ಲಿ ಬರೋಬ್ಬರಿ 18 ವರ್ಷ ಬಳಿಕ ಉದ್ಘಾಟನಾ ಪಂದ್ಯ ನಡೆಯುತ್ತಿದ್ದು, ಕಳೆದ ವರ್ಷದ ಭೀಕರ ಕಾಲ್ತುಳಿತ ಬಳಿಕ ಮತ್ತೆ ನಗರದಲ್ಲಿ ಕ್ರಿಕೆಟ್ ರಂಗೇರಲಿದೆ. ಈ ಬಾರಿ ಟೂರ್ನಿ 2 ತಿಂಗಳಿಗೂ ಹೆಚ್ಚು ಕಾಲ ನಡೆಯಲಿದೆ. ಮೇ 24ರವರೆಗೂ ಲೀಗ್ ಹಂತದ ಪಂದ್ಯಗಳು ನಡೆಯಲಿದ್ದು, ಮೇ 31ಕ್ಕೆ ಫೈನಲ್ ಪಂದ್ಯ ನಿಗದಿಯಾಗಿದೆ. ಟ್ರೋಫಿಗಾಗಿ ಈ ಬಾರಿಯೂ 10 ತಂಡಗಳು ಸೆಣಸಾಡಲಿದ್ದು, ಟೂರ್ನಿಯಲ್ಲಿ ಒಟ್ಟು 65 ದಿನಗಳ ಕಾಲ 74 ಪಂದ್ಯಗಳು ನಡೆಯಲಿವೆ.

ಬರೋಬ್ಬರಿ 18 ವರ್ಷಗಳ ಕಾಯುವಿಕೆ ಬಳಿಕ ಕಳೆದ ಬಾರಿ ಕಪ್ ಗೆದ್ದಿದ ಆರ್‌ಸಿಬಿ ತಂಡ ಈ ಬಾರಿ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಟೂರ್ನಿಗೆ ಕಾಲಿಡಲಿದ್ದು, ಮತ್ತೊಮ್ಮೆ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿ ಕಣಕ್ಕಿಳಿಯಲಿದೆ. ಈ ಬಾರಿಯೂ ಬಹುತೇಕ ದಿನ ಒಂದೇ ಪಂದ್ಯ ನಡೆಯಲಿದೆ. ಕೆಲ ವಾರಾಂತ್ಯಗಳಲ್ಲಿ 2 ಪಂದ್ಯಗಳು ನಿಗದಿಯಾಗಿವೆ. ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ, 2ನೇ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

ಟೂರ್ನಿಯಲ್ಲಿ ತಲಾ 5 ತಂಡಗಳ 2 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ತಂಡಗಳ ಈವರೆಗಿನ ಸಾಧನೆ ಆಧಾರದಲ್ಲಿ 2 ಗುಂಪುಗಳನ್ನು ರಚಿಸಲಾಗಿದೆ. ಆದರೆ ಈ ಗುಂಪುಗಳು ವರ್ಚುವಲ್ ಆಗಿದ್ದು, ಅಂಕಪಟ್ಟಿಯಲ್ಲಿ ಗಣನೆಗೆ ಬರುವುದಿಲ್ಲ, ಚೆನ್ನೈ, ಕೋಲ್ಕತಾ, ರಾಜಸ್ಥಾನ, ಆರ್‌ಸಿಬಿ, ಪಂಜಾಬ್ ಒಂದು ಗುಂಪಿನಲ್ಲಿದ್ದು, ಮುಂಬೈ, ಸನ್ ರೈಸರ್ಸ್, ಗುಜರಾತ್, ಡೆಲ್ಲಿ ಹಾಗೂ ಲಖನೌ ತಂಡಗಳು ಮತ್ತೊಂದು ಗುಂಪಿನಲ್ಲಿವೆ.

ಪ್ರತಿ ತಂಡ ತನ್ನ ಗುಂಪಿನಲ್ಲಿರುವ ಇತರ ತಂಡಗಳ ವಿರುದ್ಧ ತಲಾ 1 ಹಾಗೂ ಇನ್ನೊಂದು ಗುಂಪಿನ 5 ತಂಡಗಳ ವಿರುದ್ಧ ತಲಾ 2 ಪಂದ್ಯ ಆಡಲಿದೆ. ಉದಾಹರಣೆಗೆ, ಆರ್‌ಸಿಬಿ ತನ್ನ ಗುಂಪಿನಲ್ಲಿರುವ ಚೆನ್ನೈ, ಕೋಲ್ಕತಾ, ರಾಜಸ್ಥಾನ, ಪಂಜಾಬ್ ವಿರುದ್ಧ ತಲಾ 1 ಹಾಗೂ ಇನ್ನೊಂದು ಗುಂಪಿನಲ್ಲಿರುವ ಗುಜರಾತ್, ಮುಂಬೈ, ಲಖನೌ, ಸನ್ ರೈಸರ್ಸ್, ಡೆಲ್ಲಿ ವಿರುದ್ಧ ತಲಾ 2 ಪಂದ್ಯ ಆಡಬೇಕಿದೆ. ಅಂದರೆ, ಪ್ರತಿ ತಂಡಕ್ಕೆ ಲೀಗ್ ಹಂತದಲ್ಲಿ ತಲಾ 14 ಪಂದ್ಯ. ಲೀಗ್ ಹಂತ ಮುಕ್ತಾಯಕ್ಕೆ ಅಗ್ರ-2 ಸ್ಥಾನ ಪಡೆಯುವ ತಂಡಗಳು ಕಾಲಿಫೈಯರ್-1 ಹಾಗೂ 3, 4ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್ ಪ್ರವೇಶಿಸಲಿವೆ. ಕ್ಯಾಲಿಫೈಯರ್-1ರಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಗೇರಲಿದೆ. ಸೋತ ತಂಡ ಎಲಿಮಿನೇಟರ್‌ನಲ್ಲಿ ಗೆದ್ದ ತಂಡದ ವಿರುದ್ಧ ಆಡಲಿದ್ದು, ಅದರಲ್ಲಿ ಗೆಲ್ಲುವ ತಂಡ ಫೈನಲ್ ಪ್ರವೇಶಿಸಲಿದೆ.

ಇನ್ನೂ ತನ್ನ ನೆಚ್ಚಿನ ತಂಡಕ್ಕೆ ಶುಭಕೋರಿರುವ ವಂಚನೆ ಕೇಸ್‌ನಲ್ಲಿ ದೇಶಭ್ರಷ್ಟನಾಗಿರುವ ವಿಜಯ್‌ ಮಲ್ಯ, ಆರ್‌ಸಿಬಿ ಸಿಂಹಗಳು ಮತ್ತೆ ಘರ್ಚಿಸಲಿದೆ. ಆರ್‌ಸಿಬಿ ಆಟಗಾರರು ನಮ್ಮ ಸಿಂಹಗಳು. ಚಾಂಪಿಯನ್ಸ್‌ಗಳಿಗೆ ಶುಭವಾಗಲಿ ಎಂದು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

13 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

13 hours ago