ಕ್ರೀಡೆ

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌

ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ ಇಂದಿನಿಂದ ಆರಂಭವಾಗುತ್ತಿದೆ. ಬೆಂಗಳೂರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಉದ್ಘಾಟನಾ ಪಂದ್ಯ ನಡೆಯಲಿದೆ.

ಬೆಂಗಳೂರಿನಲ್ಲಿ ಬರೋಬ್ಬರಿ 18 ವರ್ಷ ಬಳಿಕ ಉದ್ಘಾಟನಾ ಪಂದ್ಯ ನಡೆಯುತ್ತಿದ್ದು, ಕಳೆದ ವರ್ಷದ ಭೀಕರ ಕಾಲ್ತುಳಿತ ಬಳಿಕ ಮತ್ತೆ ನಗರದಲ್ಲಿ ಕ್ರಿಕೆಟ್ ರಂಗೇರಲಿದೆ. ಈ ಬಾರಿ ಟೂರ್ನಿ 2 ತಿಂಗಳಿಗೂ ಹೆಚ್ಚು ಕಾಲ ನಡೆಯಲಿದೆ. ಮೇ 24ರವರೆಗೂ ಲೀಗ್ ಹಂತದ ಪಂದ್ಯಗಳು ನಡೆಯಲಿದ್ದು, ಮೇ 31ಕ್ಕೆ ಫೈನಲ್ ಪಂದ್ಯ ನಿಗದಿಯಾಗಿದೆ. ಟ್ರೋಫಿಗಾಗಿ ಈ ಬಾರಿಯೂ 10 ತಂಡಗಳು ಸೆಣಸಾಡಲಿದ್ದು, ಟೂರ್ನಿಯಲ್ಲಿ ಒಟ್ಟು 65 ದಿನಗಳ ಕಾಲ 74 ಪಂದ್ಯಗಳು ನಡೆಯಲಿವೆ.

ಬರೋಬ್ಬರಿ 18 ವರ್ಷಗಳ ಕಾಯುವಿಕೆ ಬಳಿಕ ಕಳೆದ ಬಾರಿ ಕಪ್ ಗೆದ್ದಿದ ಆರ್‌ಸಿಬಿ ತಂಡ ಈ ಬಾರಿ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಟೂರ್ನಿಗೆ ಕಾಲಿಡಲಿದ್ದು, ಮತ್ತೊಮ್ಮೆ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿ ಕಣಕ್ಕಿಳಿಯಲಿದೆ. ಈ ಬಾರಿಯೂ ಬಹುತೇಕ ದಿನ ಒಂದೇ ಪಂದ್ಯ ನಡೆಯಲಿದೆ. ಕೆಲ ವಾರಾಂತ್ಯಗಳಲ್ಲಿ 2 ಪಂದ್ಯಗಳು ನಿಗದಿಯಾಗಿವೆ. ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ, 2ನೇ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

ಟೂರ್ನಿಯಲ್ಲಿ ತಲಾ 5 ತಂಡಗಳ 2 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ತಂಡಗಳ ಈವರೆಗಿನ ಸಾಧನೆ ಆಧಾರದಲ್ಲಿ 2 ಗುಂಪುಗಳನ್ನು ರಚಿಸಲಾಗಿದೆ. ಆದರೆ ಈ ಗುಂಪುಗಳು ವರ್ಚುವಲ್ ಆಗಿದ್ದು, ಅಂಕಪಟ್ಟಿಯಲ್ಲಿ ಗಣನೆಗೆ ಬರುವುದಿಲ್ಲ, ಚೆನ್ನೈ, ಕೋಲ್ಕತಾ, ರಾಜಸ್ಥಾನ, ಆರ್‌ಸಿಬಿ, ಪಂಜಾಬ್ ಒಂದು ಗುಂಪಿನಲ್ಲಿದ್ದು, ಮುಂಬೈ, ಸನ್ ರೈಸರ್ಸ್, ಗುಜರಾತ್, ಡೆಲ್ಲಿ ಹಾಗೂ ಲಖನೌ ತಂಡಗಳು ಮತ್ತೊಂದು ಗುಂಪಿನಲ್ಲಿವೆ.

ಪ್ರತಿ ತಂಡ ತನ್ನ ಗುಂಪಿನಲ್ಲಿರುವ ಇತರ ತಂಡಗಳ ವಿರುದ್ಧ ತಲಾ 1 ಹಾಗೂ ಇನ್ನೊಂದು ಗುಂಪಿನ 5 ತಂಡಗಳ ವಿರುದ್ಧ ತಲಾ 2 ಪಂದ್ಯ ಆಡಲಿದೆ. ಉದಾಹರಣೆಗೆ, ಆರ್‌ಸಿಬಿ ತನ್ನ ಗುಂಪಿನಲ್ಲಿರುವ ಚೆನ್ನೈ, ಕೋಲ್ಕತಾ, ರಾಜಸ್ಥಾನ, ಪಂಜಾಬ್ ವಿರುದ್ಧ ತಲಾ 1 ಹಾಗೂ ಇನ್ನೊಂದು ಗುಂಪಿನಲ್ಲಿರುವ ಗುಜರಾತ್, ಮುಂಬೈ, ಲಖನೌ, ಸನ್ ರೈಸರ್ಸ್, ಡೆಲ್ಲಿ ವಿರುದ್ಧ ತಲಾ 2 ಪಂದ್ಯ ಆಡಬೇಕಿದೆ. ಅಂದರೆ, ಪ್ರತಿ ತಂಡಕ್ಕೆ ಲೀಗ್ ಹಂತದಲ್ಲಿ ತಲಾ 14 ಪಂದ್ಯ. ಲೀಗ್ ಹಂತ ಮುಕ್ತಾಯಕ್ಕೆ ಅಗ್ರ-2 ಸ್ಥಾನ ಪಡೆಯುವ ತಂಡಗಳು ಕಾಲಿಫೈಯರ್-1 ಹಾಗೂ 3, 4ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್ ಪ್ರವೇಶಿಸಲಿವೆ. ಕ್ಯಾಲಿಫೈಯರ್-1ರಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಗೇರಲಿದೆ. ಸೋತ ತಂಡ ಎಲಿಮಿನೇಟರ್‌ನಲ್ಲಿ ಗೆದ್ದ ತಂಡದ ವಿರುದ್ಧ ಆಡಲಿದ್ದು, ಅದರಲ್ಲಿ ಗೆಲ್ಲುವ ತಂಡ ಫೈನಲ್ ಪ್ರವೇಶಿಸಲಿದೆ.

ಇನ್ನೂ ತನ್ನ ನೆಚ್ಚಿನ ತಂಡಕ್ಕೆ ಶುಭಕೋರಿರುವ ವಂಚನೆ ಕೇಸ್‌ನಲ್ಲಿ ದೇಶಭ್ರಷ್ಟನಾಗಿರುವ ವಿಜಯ್‌ ಮಲ್ಯ, ಆರ್‌ಸಿಬಿ ಸಿಂಹಗಳು ಮತ್ತೆ ಘರ್ಚಿಸಲಿದೆ. ಆರ್‌ಸಿಬಿ ಆಟಗಾರರು ನಮ್ಮ ಸಿಂಹಗಳು. ಚಾಂಪಿಯನ್ಸ್‌ಗಳಿಗೆ ಶುಭವಾಗಲಿ ಎಂದು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

8 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

9 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

10 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

10 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

10 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

11 hours ago