ಕ್ರೀಡೆ

IPL 2025 |ಗೆದ್ದ ಗುಜರಾತ್‌ ; 2ನೇ ಪಂದ್ಯದಲ್ಲೂ ಸೋತ ಮುಂಬೈ

ಅಹಮದಾಬಾದ್‌ : ಕನ್ನಡಿಗ ಪ್ರಸಿದ್ಧ್‌ ಕೃಷ್ಣ ಅವರ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಮುಂಬೈ ಪಡೆ ಗುಜರಾತ್‌ ವಿರುದ್ಧ 36 ರನ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿತು. ಆ ಮೂಲಕ ಮುಂಬೈ ಟೂರ್ನಿಯಲ್ಲಿ ತಾವಾಡಿದ ಮೊದಲೆರೆಡು ಪಂದ್ಯಗಳಲ್ಲಿಯೂ ಸೋಲು ಕಂಡಿತು. ಇನ್ನು ಮುಂಬೈ ಮಣಿಸಿ ಗುಜರಾತ್‌ ಸತತ ಎರಡನೇ ಗೆಲುವು ದಾಖಲಿಸಿತು.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟನ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಅವರು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 196 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ಮುಂಬೈ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 160 ರನ್‌ ಗಳಿಸಿ 36 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಜಿಟಿ ಇನ್ನಿಂಗ್ಸ್‌: ಮುಂಬೈ ವಿರುದ್ಧ ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ಗೆ ಉತ್ತಮ ಆರಂಭ ದೊರೆಯಿತು. ಸಾಯ್‌ ಸುದರ್ಶನ್‌ 63(41), ನಾಯಕ ಗಿಲ್‌ 38(27) ರನ್‌ ಗಳಿಸಿ ಭದ್ರ ಬುನಾದಿ ಹಾಕಿದರು.

ಬಳಿಕ ಬಂದ ಬಟ್ಲರ್‌ 39(24), ಶಾರುಖ್‌ ಖಾನ್‌ 9(7), ರುದರ್‌ಫರ್ಡ್‌ 18(11), ರಾಹುಲ್‌ ತೆವಾಟಿಯಾ ಶೂನ್ಯ, ರಶೀದ್‌ ಖಾನ್‌ 6(4), ಸಾಯ್‌ ಕಿಶೋರ್‌ 1(1) ರನ್‌ ಗಳಿಸಿದರು. ರಬಾಡ ಔಟಾಗದೇ 7(5) ರನ್‌ ಗಳಿಸಿದರು.

ಮುಂಬೈ ಪರ ಹಾರ್ದಿಕ್‌ ಪಾಂಡ್ಯ ಎರಡು, ಬೋಲ್ಟ್‌, ದೀಪಕ್‌ ಚಾಹರ್‌, ರೆಹಮಾನ್‌ ಹಾಗೂ ಸತ್ಯ ನಾರಾಯಣ ತಲಾ ಒಂದೊಂದು ವಿಕೆಟ್‌ ಪಡೆದರು.

ಮುಂಬೈ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಆರಂಭಿಕ ಆಘಾತ ಎದುರಾಯಿತು. ರೋಹಿತ್‌ ಶರ್ಮಾ 8(4), ರಿಕೆಲ್ಟನ್‌ 6(9) ರನ್‌ ಗಳಿಸಿ ಬಂದಷ್ಟೆ ವೇಗವಾಗಿ ಹಿಂತಿರುಗಿದರು.

ಬಳಿಕ ಜೊತೆಯಾದ ತಿಲಕ್‌ ವರ್ಮಾ 39(36) ಹಾಗೂ ಸೂರ್ಯಕುಮಾರ್‌ ಯಾದವ್‌ 48(28) ಅಲ್ಪ ಹೋರಾಟ ತೋರಿದರು ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ಬಳಿಕ ಬಂದ ಬೇರಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ.

ಉಳಿದಂತೆ ರಾಬಿನ್‌ 3(6), ನಾಯಕ ಹಾರ್ದಿಕ್‌ ಪಾಂಡ್ಯ 11(17), ನಮನ್‌ ಧಿರ್‌ ಔಟಾಗದೇ 18(11), ಮಿಚೆಲ್‌ ಸ್ಯಾಂಟ್ನರ್‌ ಔಟಾಗದೇ 18(9) ರನ್‌ ಗಳಸಿ ಸ್ಕ್ರೀಸ್‌ನಲ್ಲಿ ಉಳಿದರು.

ಗುಜರಾತ್‌ ಪರ ಪ್ರಸಿದ್ಧ್‌ ಕೃಷ್ಣ ಹಾಗೂ ಮೊಹಮದ್‌ ಸಿರಾಜ್‌ ತಲಾ ಎರಡು ವಿಕೆಟ್‌, ಸಾಯ್‌ ಕಿಶೋರ್‌ ಹಾಗೂ ರಬಾಡ ತಲಾ ಒಂದೊಂದು ವಿಕೆಟ್‌ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿಣ್ಣರ ಪ್ರತಿಭೆಗೆ ರಂಗಭೂಮಿ ಸಹಕಾರಿ ; ಹೆಚ್.ಜನಾರ್ಧನ್‌

ಮೈಸೂರ : ರಂಗಭೂಮಿ ಮತ್ತು ನಾಟಕಗಳು ಮಕ್ಕಳನ್ನು ಉತ್ತಮ ಮನುಷ್ಯರಾಗಿ ಮಾಡುವ ಕಲಾ ಕೇಂದ್ರಗಳಾಗಿವೆ ಎಂದು ರಂಗಾಯಣದ ಮಾಜಿ ನಿರ್ದೇಶಕ…

2 hours ago

ಜಾತಿಗಣತಿ ವರದಿ | ಇದೊಂದು ಎದುರಾಳಿ ಮಣಿಸುವ ತಂತ್ರ ಎಂದ ಬಿಜೆಪಿ ಶಾಸಕ

ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ…

3 hours ago

ಅಧಿಕಾರಿಗಳು ರೈತರ ಶ್ರೇಯೋಭಿವೃದ್ದಿಗೆ ಶ್ರಮಿಸಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ (Minister…

3 hours ago

ಬಿಜೆಪಿ ನಾಯಕರು ಮೀಸಲಾತಿ ವಿರೋಧಿಗಳು: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah)

ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ…

3 hours ago

ಸಾಧಕರ ಸಂದೇಶಗಳನ್ನು ಸಮಾಜಕ್ಕೆ ತಿಳಿಸಲು ಜಯಂತಿಗಳ ಆಚರಣೆ: ಎಡಿಸಿ ಡಾ.ಪಿ ಶಿವರಾಜು

ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು…

4 hours ago

ಗಾಳಿ, ಮಳೆಯ ವೇಳೆ ವಿದ್ಯುತ್‌ ಅನಾಹುತ ತಪ್ಪಿಸಲು ಸೆಸ್ಕ್‌ ಸನ್ನದ್ಧ

ವಿದ್ಯುತ್ ಅಪಾಯಗಳ ಬಗ್ಗೆ ಎಚ್ಚರಿಕೆವಹಿಸಲು ಸೂಚನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಗ್ರಾಹಕರಿಗೆ ಅಡಚಣೆ ರಹಿತವಾದ…

4 hours ago