ಕ್ರೀಡೆ

IPL 2025 |ಗೆದ್ದ ಗುಜರಾತ್‌ ; 2ನೇ ಪಂದ್ಯದಲ್ಲೂ ಸೋತ ಮುಂಬೈ

ಅಹಮದಾಬಾದ್‌ : ಕನ್ನಡಿಗ ಪ್ರಸಿದ್ಧ್‌ ಕೃಷ್ಣ ಅವರ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಮುಂಬೈ ಪಡೆ ಗುಜರಾತ್‌ ವಿರುದ್ಧ 36 ರನ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿತು. ಆ ಮೂಲಕ ಮುಂಬೈ ಟೂರ್ನಿಯಲ್ಲಿ ತಾವಾಡಿದ ಮೊದಲೆರೆಡು ಪಂದ್ಯಗಳಲ್ಲಿಯೂ ಸೋಲು ಕಂಡಿತು. ಇನ್ನು ಮುಂಬೈ ಮಣಿಸಿ ಗುಜರಾತ್‌ ಸತತ ಎರಡನೇ ಗೆಲುವು ದಾಖಲಿಸಿತು.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟನ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಅವರು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 196 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ಮುಂಬೈ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 160 ರನ್‌ ಗಳಿಸಿ 36 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಜಿಟಿ ಇನ್ನಿಂಗ್ಸ್‌: ಮುಂಬೈ ವಿರುದ್ಧ ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ಗೆ ಉತ್ತಮ ಆರಂಭ ದೊರೆಯಿತು. ಸಾಯ್‌ ಸುದರ್ಶನ್‌ 63(41), ನಾಯಕ ಗಿಲ್‌ 38(27) ರನ್‌ ಗಳಿಸಿ ಭದ್ರ ಬುನಾದಿ ಹಾಕಿದರು.

ಬಳಿಕ ಬಂದ ಬಟ್ಲರ್‌ 39(24), ಶಾರುಖ್‌ ಖಾನ್‌ 9(7), ರುದರ್‌ಫರ್ಡ್‌ 18(11), ರಾಹುಲ್‌ ತೆವಾಟಿಯಾ ಶೂನ್ಯ, ರಶೀದ್‌ ಖಾನ್‌ 6(4), ಸಾಯ್‌ ಕಿಶೋರ್‌ 1(1) ರನ್‌ ಗಳಿಸಿದರು. ರಬಾಡ ಔಟಾಗದೇ 7(5) ರನ್‌ ಗಳಿಸಿದರು.

ಮುಂಬೈ ಪರ ಹಾರ್ದಿಕ್‌ ಪಾಂಡ್ಯ ಎರಡು, ಬೋಲ್ಟ್‌, ದೀಪಕ್‌ ಚಾಹರ್‌, ರೆಹಮಾನ್‌ ಹಾಗೂ ಸತ್ಯ ನಾರಾಯಣ ತಲಾ ಒಂದೊಂದು ವಿಕೆಟ್‌ ಪಡೆದರು.

ಮುಂಬೈ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಆರಂಭಿಕ ಆಘಾತ ಎದುರಾಯಿತು. ರೋಹಿತ್‌ ಶರ್ಮಾ 8(4), ರಿಕೆಲ್ಟನ್‌ 6(9) ರನ್‌ ಗಳಿಸಿ ಬಂದಷ್ಟೆ ವೇಗವಾಗಿ ಹಿಂತಿರುಗಿದರು.

ಬಳಿಕ ಜೊತೆಯಾದ ತಿಲಕ್‌ ವರ್ಮಾ 39(36) ಹಾಗೂ ಸೂರ್ಯಕುಮಾರ್‌ ಯಾದವ್‌ 48(28) ಅಲ್ಪ ಹೋರಾಟ ತೋರಿದರು ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ಬಳಿಕ ಬಂದ ಬೇರಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ.

ಉಳಿದಂತೆ ರಾಬಿನ್‌ 3(6), ನಾಯಕ ಹಾರ್ದಿಕ್‌ ಪಾಂಡ್ಯ 11(17), ನಮನ್‌ ಧಿರ್‌ ಔಟಾಗದೇ 18(11), ಮಿಚೆಲ್‌ ಸ್ಯಾಂಟ್ನರ್‌ ಔಟಾಗದೇ 18(9) ರನ್‌ ಗಳಸಿ ಸ್ಕ್ರೀಸ್‌ನಲ್ಲಿ ಉಳಿದರು.

ಗುಜರಾತ್‌ ಪರ ಪ್ರಸಿದ್ಧ್‌ ಕೃಷ್ಣ ಹಾಗೂ ಮೊಹಮದ್‌ ಸಿರಾಜ್‌ ತಲಾ ಎರಡು ವಿಕೆಟ್‌, ಸಾಯ್‌ ಕಿಶೋರ್‌ ಹಾಗೂ ರಬಾಡ ತಲಾ ಒಂದೊಂದು ವಿಕೆಟ್‌ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

8 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

9 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

9 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

9 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

9 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

9 hours ago