ನವದೆಹಲಿ: ಇದೇ ತಿಂಗಳ 22ರಿಂದ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ನಾಯಕನಾಗಿ ಭಾರತದ ಬ್ಯಾಟರ್ ಅಜಿಂಕ್ಯ ರಹಾನೆ ಅವರನ್ನು ನೇಮಕ ಮಾಡಲಾಗಿದೆ.
ದೀರ್ಘಕಾಲದಿಂದ ಕೆಕೆಆರ್ ತಂಡದಲ್ಲಿ ಆಡುತ್ತಿರುವ ವೆಂಕಟೇಶ್ ಅಯ್ಯರ್ ಅವರನ್ನು ಉಪನಾಯಕನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ರಕಟಣೆ ಬಿಡುಗಡೆ ಮಾಡಿದೆ.
ಐಲಿಎಲ್ನಲ್ಲಿ ಅತ್ಯಂತ ಯಶಸ್ವಿ ತಂಡದಲ್ಲಿ ಒಂದಾಗಿರುವ ಕೆಕೆಆರ್ ತಂಡವನ್ನು ಮುನ್ನಡೆಸುವ ಹೊಣೆ ನನಗೆ ನೀಡಿರುವುದು ಗೌರವದ ಸಂಗತಿ. ನಮ್ಮ ತಂಡವು ಎಲ್ಲಾ ವಿಭಾಗದಲ್ಲೂ ಉತ್ತಮವಾಗಿದ್ದು, ಎಲ್ಲರೊಂದಿಗೆ ಕೆಲಸ ಮಾಡಲು ಮತ್ತು ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಸವಾಲು ಸ್ವೀಕರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳೀಕೆಯಲ್ಲಿ ತಿಳಿಸಿದ್ದಾರೆ.
ಮಾ.22ರಂದು ಈಡನ್ ಗಾರ್ಡನ್ಸ್ನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡ, ಆರ್ಸಿಬಿ ತಂಡವನ್ನು ಎದುರಿಸಲಿದೆ.
ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್ ಸಿಂಗ್ ಅಭಿನಯದ ಧುರಂಧರ್-2 ದಾಖಲೆಗಳನ್ನು ಮುರಿಯುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್ನಲ್ಲಿ…
ವಾಷಿಂಗ್ಟನ್: ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…
ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು…
ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…
ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…