ನವದೆಹಲಿ: ಇದೇ ತಿಂಗಳ 22ರಿಂದ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ನಾಯಕನಾಗಿ ಭಾರತದ ಬ್ಯಾಟರ್ ಅಜಿಂಕ್ಯ ರಹಾನೆ ಅವರನ್ನು ನೇಮಕ ಮಾಡಲಾಗಿದೆ.
ದೀರ್ಘಕಾಲದಿಂದ ಕೆಕೆಆರ್ ತಂಡದಲ್ಲಿ ಆಡುತ್ತಿರುವ ವೆಂಕಟೇಶ್ ಅಯ್ಯರ್ ಅವರನ್ನು ಉಪನಾಯಕನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ರಕಟಣೆ ಬಿಡುಗಡೆ ಮಾಡಿದೆ.
ಐಲಿಎಲ್ನಲ್ಲಿ ಅತ್ಯಂತ ಯಶಸ್ವಿ ತಂಡದಲ್ಲಿ ಒಂದಾಗಿರುವ ಕೆಕೆಆರ್ ತಂಡವನ್ನು ಮುನ್ನಡೆಸುವ ಹೊಣೆ ನನಗೆ ನೀಡಿರುವುದು ಗೌರವದ ಸಂಗತಿ. ನಮ್ಮ ತಂಡವು ಎಲ್ಲಾ ವಿಭಾಗದಲ್ಲೂ ಉತ್ತಮವಾಗಿದ್ದು, ಎಲ್ಲರೊಂದಿಗೆ ಕೆಲಸ ಮಾಡಲು ಮತ್ತು ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಸವಾಲು ಸ್ವೀಕರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳೀಕೆಯಲ್ಲಿ ತಿಳಿಸಿದ್ದಾರೆ.
ಮಾ.22ರಂದು ಈಡನ್ ಗಾರ್ಡನ್ಸ್ನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡ, ಆರ್ಸಿಬಿ ತಂಡವನ್ನು ಎದುರಿಸಲಿದೆ.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…