ನವದೆಹಲಿ: ಇದೇ ತಿಂಗಳ 22ರಿಂದ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ನಾಯಕನಾಗಿ ಭಾರತದ ಬ್ಯಾಟರ್ ಅಜಿಂಕ್ಯ ರಹಾನೆ ಅವರನ್ನು ನೇಮಕ ಮಾಡಲಾಗಿದೆ.
ದೀರ್ಘಕಾಲದಿಂದ ಕೆಕೆಆರ್ ತಂಡದಲ್ಲಿ ಆಡುತ್ತಿರುವ ವೆಂಕಟೇಶ್ ಅಯ್ಯರ್ ಅವರನ್ನು ಉಪನಾಯಕನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ರಕಟಣೆ ಬಿಡುಗಡೆ ಮಾಡಿದೆ.
ಐಲಿಎಲ್ನಲ್ಲಿ ಅತ್ಯಂತ ಯಶಸ್ವಿ ತಂಡದಲ್ಲಿ ಒಂದಾಗಿರುವ ಕೆಕೆಆರ್ ತಂಡವನ್ನು ಮುನ್ನಡೆಸುವ ಹೊಣೆ ನನಗೆ ನೀಡಿರುವುದು ಗೌರವದ ಸಂಗತಿ. ನಮ್ಮ ತಂಡವು ಎಲ್ಲಾ ವಿಭಾಗದಲ್ಲೂ ಉತ್ತಮವಾಗಿದ್ದು, ಎಲ್ಲರೊಂದಿಗೆ ಕೆಲಸ ಮಾಡಲು ಮತ್ತು ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಸವಾಲು ಸ್ವೀಕರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳೀಕೆಯಲ್ಲಿ ತಿಳಿಸಿದ್ದಾರೆ.
ಮಾ.22ರಂದು ಈಡನ್ ಗಾರ್ಡನ್ಸ್ನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡ, ಆರ್ಸಿಬಿ ತಂಡವನ್ನು ಎದುರಿಸಲಿದೆ.
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…
ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…
ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…