ಕ್ರೀಡೆ

IPL2025: ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಕ್ಯಾಪಿಟಲ್ಸ್‌

ಚೆನ್ನೈ: ಕನ್ನಡಿಗ ಕೆ.ಎಲ್‌ ರಾಹುಲ್‌ ಅವರ ಅಮೋಘ ಅರ್ಧಶತಕದ ಬಲದಿಂದಾಗಿ ಅತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು 25 ರನ್‌ಗಳ ಅಂತರದಿಂದ ಡೆಲ್ಲಿ ಕ್ಯಾಪಿಟಲ್ಸ್‌ ಮಣಿಸಿದೆ. ಆ ಮೂಲಕ ಡೆಲ್ಲಿ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿದೆ. ಇತ್ತ ಚೆನ್ನೈ ಹ್ಯಾಟ್ರಿಕ್‌ ಸೋಲನುಭವಿಸಿದೆ.

ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 183 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ಚೆನ್ನೈ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 158 ರನ್‌ ಗಳಿಸಿ 25 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಕನ್ನಡಿಗ ಕೆ.ಎಲ್‌ ರಾಹುಲ್‌ 77(51) ಹಾಗೂ ಅಭಿಷೇಕ್‌ ಪೋರೆಲ್‌ 33(20) ತಂಡಕ್ಕೆ ಭದ್ರ ಬುನಾದಿ ಹಾಕಿದರು. ಇವರ ನಂತರ ನಾಯಕ ಅಕ್ಷರ್‌ ಪಟೇಲ್‌ 21(14), ಸಮೀರ್‌ ರಿಜ್ವಿ 20(15), ಅಶುತೋಶ್‌ ಶರ್ಮಾ 1(1), ಸ್ಟಬ್ಸ್‌ 24(12)  ರನ್‌ ಗಳಿಸಿ ಸ್ಕ್ರೀಸ್‌ನಲ್ಲಿ ಉಳಿದರು.

ಸಿಎಸ್‌ಕೆ ಪರ ಖಲೀಲ್‌ ಅಹ್ಮದ್‌ 2 ವಿಕೆಟ್‌, ರವೀಂದ್ರ ಜಡೇಜಾ, ನೂರ್‌ ಅಹ್ಮದ್‌ ಹಾಗೂ ಪತಿರಣ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಚೆನ್ನೈ ಮತ್ತೊಮ್ಮೆ ಮುಗ್ಗರಿಸಿತು. ರಚಿನ್‌ ರವೀಂದ್ರ 3(6), ಡೆವೋನ್‌ ಕಾನ್ವೆ 13(14) ರನ್‌ ಗಳಿಸಿ ಬೇಗನೇ ಔಟಾದರು. ಬಳಿಕ ಬಂದ ನಾಯಕ ಗಾಯಕ್ವಾಡ್‌ 5(4), ಶಿವಂ ದುಬೆ 18(15), ಜಡೇಜಾ 2(3) ರನ್‌ ಗಳಿಸಿ ಔಟಾದರು.

ಕೊನೆಯಲ್ಲಿ ಹೋರಾಡಿದ ವಿಜಯ್‌ ಶಂಕರ್‌ ಹಾಗೂ ಮಹೇಂದ್ರ ಸಿಂಗ್‌ ಧೋನಿ ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ಧೋನಿ ಔಟಾಗದೇ 30(26) ರನ್‌ ಗಳಿಸಿದರೇ, ವಿಜಯ್‌ ಶಂಕರ್‌ ಔಟಾಗದೇ 54 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್‌ ಸಹಿತ 69 ರನ್‌ ಗಳಿಸಿದರು.

ಡೆಲ್ಲಿ ಪರ ವಿಪ್ರಾಜ್‌ ನಿಗಮ್‌ 2 ವಿಕೆಟ್‌, ಸ್ಟಾರ್ಕ್‌, ಮುಖೇಶ್‌ ಕುಮಾರ್‌ ಮತ್ತು ಕುಲ್ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

6 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

7 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

7 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

7 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

8 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

8 hours ago