ಚೆನ್ನೈ: ಕನ್ನಡಿಗ ಕೆ.ಎಲ್ ರಾಹುಲ್ ಅವರ ಅಮೋಘ ಅರ್ಧಶತಕದ ಬಲದಿಂದಾಗಿ ಅತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 25 ರನ್ಗಳ ಅಂತರದಿಂದ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದೆ. ಆ ಮೂಲಕ ಡೆಲ್ಲಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಇತ್ತ ಚೆನ್ನೈ ಹ್ಯಾಟ್ರಿಕ್ ಸೋಲನುಭವಿಸಿದೆ.
ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 183 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಚೆನ್ನೈ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿ 25 ರನ್ಗಳ ಅಂತರದಿಂದ ಸೋಲೊಪ್ಪಿಕೊಂಡಿತು.
ಕನ್ನಡಿಗ ಕೆ.ಎಲ್ ರಾಹುಲ್ 77(51) ಹಾಗೂ ಅಭಿಷೇಕ್ ಪೋರೆಲ್ 33(20) ತಂಡಕ್ಕೆ ಭದ್ರ ಬುನಾದಿ ಹಾಕಿದರು. ಇವರ ನಂತರ ನಾಯಕ ಅಕ್ಷರ್ ಪಟೇಲ್ 21(14), ಸಮೀರ್ ರಿಜ್ವಿ 20(15), ಅಶುತೋಶ್ ಶರ್ಮಾ 1(1), ಸ್ಟಬ್ಸ್ 24(12) ರನ್ ಗಳಿಸಿ ಸ್ಕ್ರೀಸ್ನಲ್ಲಿ ಉಳಿದರು.
ಸಿಎಸ್ಕೆ ಪರ ಖಲೀಲ್ ಅಹ್ಮದ್ 2 ವಿಕೆಟ್, ರವೀಂದ್ರ ಜಡೇಜಾ, ನೂರ್ ಅಹ್ಮದ್ ಹಾಗೂ ಪತಿರಣ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಚೆನ್ನೈ ಮತ್ತೊಮ್ಮೆ ಮುಗ್ಗರಿಸಿತು. ರಚಿನ್ ರವೀಂದ್ರ 3(6), ಡೆವೋನ್ ಕಾನ್ವೆ 13(14) ರನ್ ಗಳಿಸಿ ಬೇಗನೇ ಔಟಾದರು. ಬಳಿಕ ಬಂದ ನಾಯಕ ಗಾಯಕ್ವಾಡ್ 5(4), ಶಿವಂ ದುಬೆ 18(15), ಜಡೇಜಾ 2(3) ರನ್ ಗಳಿಸಿ ಔಟಾದರು.
ಕೊನೆಯಲ್ಲಿ ಹೋರಾಡಿದ ವಿಜಯ್ ಶಂಕರ್ ಹಾಗೂ ಮಹೇಂದ್ರ ಸಿಂಗ್ ಧೋನಿ ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ಧೋನಿ ಔಟಾಗದೇ 30(26) ರನ್ ಗಳಿಸಿದರೇ, ವಿಜಯ್ ಶಂಕರ್ ಔಟಾಗದೇ 54 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 69 ರನ್ ಗಳಿಸಿದರು.
ಡೆಲ್ಲಿ ಪರ ವಿಪ್ರಾಜ್ ನಿಗಮ್ 2 ವಿಕೆಟ್, ಸ್ಟಾರ್ಕ್, ಮುಖೇಶ್ ಕುಮಾರ್ ಮತ್ತು ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…