ಕ್ರೀಡೆ

IPL2025: ಗುಜರಾತ್‌ಗೆ ಸುಲಭ ತುತ್ತಾದ ಸನ್‌ ರೈಸರ್ಸ್‌

ಹೈದರಾಬಾದ್‌: ಮೊಹಮ್ಮದ್ ಸಿರಾಜ್‌ ಮಾರಕ ದಾಳಿ (17/4) ಹಾಗೂ ನಾಯಕ ಶುಭಮನ್‌ ಗಿಲ್‌ 63(43) ಅವರ ಸಮಯೋಚಿತ ಅರ್ಧಶತಕದ ನೆರವಿನಿಂದ ಗುಜರಾತ್‌ ತಂಡವು ಹೈದರಾಬಾದ್‌ ತಂಡದ ವಿರುದ್ಧ 7 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ

ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಗುಜರಾತ್‌ ಅತಿಥೇಯ ಹೈದರಾಬಾದ್‌ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ಅದರಂತೆ ಬ್ಯಾಂಟಿಂಗ್‌ ಆರಂಭಿಸಿದ ಹೈದರಾಬಾದ್‌ ತಂಡ ಗುಜರಾತ್‌ ಟೈಟಾನ್ಸ್‌ ಬೌಲರ್‌ಗಳ ದಾಳಿಗೆ ನಲುಗಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 152 ರನ್‌ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ನಿತೀಶ್‌ ರೆಡ್ಡಿ 31(34) ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ ಎನಿಸಿದರು.

ಉಳಿದಂತೆ ಅಭೀಷೇಕ್‌ ಶರ್ಮಾ 18(16), ಇಶಾನ್‌ ಕಿಶಾನ್‌ 17(14), ಕ್ಲಾಸೆನ್‌ 27(19), ಅಂಕಿತ್‌ ವರ್ಮಾ 18(14) ಹಾಗೂ ಕೊನೆಯಲ್ಲಿ ನಾಯಕ ಪ್ಯಾಟ್‌ ಕಮಿನ್ಸ್‌ 22(9) ರನ್‌ಗಳಿಸಿದರು.

ಗುಜರಾತ್‌ ಪರ ಮೊಹಮ್ಮದ್‌ ಸಿರಾಜ್‌ 4 ವಿಕೆಟ್‌ ಕಬಳಿಸಿದರು. ಪ್ರಸಿದ್‌ ಕೃಷ್ಣ ಹಾಗೂ ಸಾಯಿ ಕಿಶೋರ್‌ ತಲಾ ಎರಡು ವಿಕಟ್‌ ಪಡೆದರು.

ಸುಲಭ ಗುರಿ ಬೆನ್ನತ್ತಿದ ಗುಜರಾತ್‌ ತಂಡ 16.4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 153 ರನ್‌ಗಳಿಸಿ ಗೆಲುವಿನ ನಗೆ ಬೀರಿತು.

ಆರಂಭಿಕ ಬ್ಯಾಟರ್‌ ಸಾಯಿ ಸುದರ್ಶನ್‌ 5(9) ಹಾಗೂ ಬಟ್ಲರ್‌ ವಿಕೆಟ್‌ ಬಳಿಕ ಒಂದಾದ ನಾಯಕ ಶುಭಮನ್‌ ಗಿಲ್‌ 61(43)* ಹಾಗೂ ವಾಷಿಂಗ್ಟನ್‌ ಸುಂದರ್‌ 49(29) ರನ್‌ಗಳ ಕಾಣಿಕೆ ನೀಡಿ ತಂಡವನ್ನು ಗೆಲುವಿನ ಸನಿಹ ತಂದರು. ಕೊನೆಯಲ್ಲಿ ರುದರ್‌ಫೋರ್ಡ್‌ 35(16)* ರನ್‌ ಬಾರಿಸುವ ಮೂಲಕ ಗುಜರಾತ್‌ ತಂಡಕ್ಕೆ ಗೆಲುವು ತಂದುಕೊಟ್ಟರು.

ಹೈದರಾಬಾದ್‌ ಪರ ಮೊಹಮ್ಮದ್‌ ಶಮಿ 2 ವಿಕೆಟ್‌ ಪಡೆದರೆ, ಪ್ಯಾಟ್‌ ಕಮಿನ್ಸ್‌ ಒಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

22 mins ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

1 hour ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

2 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

5 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

5 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

5 hours ago