ಕ್ರೀಡೆ

IPL2025: ಗುಜರಾತ್‌ಗೆ ಸುಲಭ ತುತ್ತಾದ ಸನ್‌ ರೈಸರ್ಸ್‌

ಹೈದರಾಬಾದ್‌: ಮೊಹಮ್ಮದ್ ಸಿರಾಜ್‌ ಮಾರಕ ದಾಳಿ (17/4) ಹಾಗೂ ನಾಯಕ ಶುಭಮನ್‌ ಗಿಲ್‌ 63(43) ಅವರ ಸಮಯೋಚಿತ ಅರ್ಧಶತಕದ ನೆರವಿನಿಂದ ಗುಜರಾತ್‌ ತಂಡವು ಹೈದರಾಬಾದ್‌ ತಂಡದ ವಿರುದ್ಧ 7 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ

ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಗುಜರಾತ್‌ ಅತಿಥೇಯ ಹೈದರಾಬಾದ್‌ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ಅದರಂತೆ ಬ್ಯಾಂಟಿಂಗ್‌ ಆರಂಭಿಸಿದ ಹೈದರಾಬಾದ್‌ ತಂಡ ಗುಜರಾತ್‌ ಟೈಟಾನ್ಸ್‌ ಬೌಲರ್‌ಗಳ ದಾಳಿಗೆ ನಲುಗಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 152 ರನ್‌ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ನಿತೀಶ್‌ ರೆಡ್ಡಿ 31(34) ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ ಎನಿಸಿದರು.

ಉಳಿದಂತೆ ಅಭೀಷೇಕ್‌ ಶರ್ಮಾ 18(16), ಇಶಾನ್‌ ಕಿಶಾನ್‌ 17(14), ಕ್ಲಾಸೆನ್‌ 27(19), ಅಂಕಿತ್‌ ವರ್ಮಾ 18(14) ಹಾಗೂ ಕೊನೆಯಲ್ಲಿ ನಾಯಕ ಪ್ಯಾಟ್‌ ಕಮಿನ್ಸ್‌ 22(9) ರನ್‌ಗಳಿಸಿದರು.

ಗುಜರಾತ್‌ ಪರ ಮೊಹಮ್ಮದ್‌ ಸಿರಾಜ್‌ 4 ವಿಕೆಟ್‌ ಕಬಳಿಸಿದರು. ಪ್ರಸಿದ್‌ ಕೃಷ್ಣ ಹಾಗೂ ಸಾಯಿ ಕಿಶೋರ್‌ ತಲಾ ಎರಡು ವಿಕಟ್‌ ಪಡೆದರು.

ಸುಲಭ ಗುರಿ ಬೆನ್ನತ್ತಿದ ಗುಜರಾತ್‌ ತಂಡ 16.4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 153 ರನ್‌ಗಳಿಸಿ ಗೆಲುವಿನ ನಗೆ ಬೀರಿತು.

ಆರಂಭಿಕ ಬ್ಯಾಟರ್‌ ಸಾಯಿ ಸುದರ್ಶನ್‌ 5(9) ಹಾಗೂ ಬಟ್ಲರ್‌ ವಿಕೆಟ್‌ ಬಳಿಕ ಒಂದಾದ ನಾಯಕ ಶುಭಮನ್‌ ಗಿಲ್‌ 61(43)* ಹಾಗೂ ವಾಷಿಂಗ್ಟನ್‌ ಸುಂದರ್‌ 49(29) ರನ್‌ಗಳ ಕಾಣಿಕೆ ನೀಡಿ ತಂಡವನ್ನು ಗೆಲುವಿನ ಸನಿಹ ತಂದರು. ಕೊನೆಯಲ್ಲಿ ರುದರ್‌ಫೋರ್ಡ್‌ 35(16)* ರನ್‌ ಬಾರಿಸುವ ಮೂಲಕ ಗುಜರಾತ್‌ ತಂಡಕ್ಕೆ ಗೆಲುವು ತಂದುಕೊಟ್ಟರು.

ಹೈದರಾಬಾದ್‌ ಪರ ಮೊಹಮ್ಮದ್‌ ಶಮಿ 2 ವಿಕೆಟ್‌ ಪಡೆದರೆ, ಪ್ಯಾಟ್‌ ಕಮಿನ್ಸ್‌ ಒಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

7 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

9 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

9 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

9 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

9 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

9 hours ago