ಹೈದರಾಬಾದ್: ಮೊಹಮ್ಮದ್ ಸಿರಾಜ್ ಮಾರಕ ದಾಳಿ (17/4) ಹಾಗೂ ನಾಯಕ ಶುಭಮನ್ ಗಿಲ್ 63(43) ಅವರ ಸಮಯೋಚಿತ ಅರ್ಧಶತಕದ ನೆರವಿನಿಂದ ಗುಜರಾತ್ ತಂಡವು ಹೈದರಾಬಾದ್ ತಂಡದ ವಿರುದ್ಧ 7 ವಿಕೆಟ್ಗಳ ಸುಲಭ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಅತಿಥೇಯ ಹೈದರಾಬಾದ್ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು.
ಅದರಂತೆ ಬ್ಯಾಂಟಿಂಗ್ ಆರಂಭಿಸಿದ ಹೈದರಾಬಾದ್ ತಂಡ ಗುಜರಾತ್ ಟೈಟಾನ್ಸ್ ಬೌಲರ್ಗಳ ದಾಳಿಗೆ ನಲುಗಿ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ನಿತೀಶ್ ರೆಡ್ಡಿ 31(34) ಅತಿ ಹೆಚ್ಚು ರನ್ಗಳಿಸಿದ ಬ್ಯಾಟರ್ ಎನಿಸಿದರು.
ಉಳಿದಂತೆ ಅಭೀಷೇಕ್ ಶರ್ಮಾ 18(16), ಇಶಾನ್ ಕಿಶಾನ್ 17(14), ಕ್ಲಾಸೆನ್ 27(19), ಅಂಕಿತ್ ವರ್ಮಾ 18(14) ಹಾಗೂ ಕೊನೆಯಲ್ಲಿ ನಾಯಕ ಪ್ಯಾಟ್ ಕಮಿನ್ಸ್ 22(9) ರನ್ಗಳಿಸಿದರು.
ಗುಜರಾತ್ ಪರ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿದರು. ಪ್ರಸಿದ್ ಕೃಷ್ಣ ಹಾಗೂ ಸಾಯಿ ಕಿಶೋರ್ ತಲಾ ಎರಡು ವಿಕಟ್ ಪಡೆದರು.
ಸುಲಭ ಗುರಿ ಬೆನ್ನತ್ತಿದ ಗುಜರಾತ್ ತಂಡ 16.4 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 153 ರನ್ಗಳಿಸಿ ಗೆಲುವಿನ ನಗೆ ಬೀರಿತು.
ಆರಂಭಿಕ ಬ್ಯಾಟರ್ ಸಾಯಿ ಸುದರ್ಶನ್ 5(9) ಹಾಗೂ ಬಟ್ಲರ್ ವಿಕೆಟ್ ಬಳಿಕ ಒಂದಾದ ನಾಯಕ ಶುಭಮನ್ ಗಿಲ್ 61(43)* ಹಾಗೂ ವಾಷಿಂಗ್ಟನ್ ಸುಂದರ್ 49(29) ರನ್ಗಳ ಕಾಣಿಕೆ ನೀಡಿ ತಂಡವನ್ನು ಗೆಲುವಿನ ಸನಿಹ ತಂದರು. ಕೊನೆಯಲ್ಲಿ ರುದರ್ಫೋರ್ಡ್ 35(16)* ರನ್ ಬಾರಿಸುವ ಮೂಲಕ ಗುಜರಾತ್ ತಂಡಕ್ಕೆ ಗೆಲುವು ತಂದುಕೊಟ್ಟರು.
ಹೈದರಾಬಾದ್ ಪರ ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ, ಪ್ಯಾಟ್ ಕಮಿನ್ಸ್ ಒಂದು ವಿಕೆಟ್ ಪಡೆದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…