ಕ್ರೀಡೆ

IPL2025: ಗುಜರಾತ್‌ಗೆ ಸುಲಭ ತುತ್ತಾದ ಸನ್‌ ರೈಸರ್ಸ್‌

ಹೈದರಾಬಾದ್‌: ಮೊಹಮ್ಮದ್ ಸಿರಾಜ್‌ ಮಾರಕ ದಾಳಿ (17/4) ಹಾಗೂ ನಾಯಕ ಶುಭಮನ್‌ ಗಿಲ್‌ 63(43) ಅವರ ಸಮಯೋಚಿತ ಅರ್ಧಶತಕದ ನೆರವಿನಿಂದ ಗುಜರಾತ್‌ ತಂಡವು ಹೈದರಾಬಾದ್‌ ತಂಡದ ವಿರುದ್ಧ 7 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ

ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಗುಜರಾತ್‌ ಅತಿಥೇಯ ಹೈದರಾಬಾದ್‌ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ಅದರಂತೆ ಬ್ಯಾಂಟಿಂಗ್‌ ಆರಂಭಿಸಿದ ಹೈದರಾಬಾದ್‌ ತಂಡ ಗುಜರಾತ್‌ ಟೈಟಾನ್ಸ್‌ ಬೌಲರ್‌ಗಳ ದಾಳಿಗೆ ನಲುಗಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 152 ರನ್‌ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ನಿತೀಶ್‌ ರೆಡ್ಡಿ 31(34) ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ ಎನಿಸಿದರು.

ಉಳಿದಂತೆ ಅಭೀಷೇಕ್‌ ಶರ್ಮಾ 18(16), ಇಶಾನ್‌ ಕಿಶಾನ್‌ 17(14), ಕ್ಲಾಸೆನ್‌ 27(19), ಅಂಕಿತ್‌ ವರ್ಮಾ 18(14) ಹಾಗೂ ಕೊನೆಯಲ್ಲಿ ನಾಯಕ ಪ್ಯಾಟ್‌ ಕಮಿನ್ಸ್‌ 22(9) ರನ್‌ಗಳಿಸಿದರು.

ಗುಜರಾತ್‌ ಪರ ಮೊಹಮ್ಮದ್‌ ಸಿರಾಜ್‌ 4 ವಿಕೆಟ್‌ ಕಬಳಿಸಿದರು. ಪ್ರಸಿದ್‌ ಕೃಷ್ಣ ಹಾಗೂ ಸಾಯಿ ಕಿಶೋರ್‌ ತಲಾ ಎರಡು ವಿಕಟ್‌ ಪಡೆದರು.

ಸುಲಭ ಗುರಿ ಬೆನ್ನತ್ತಿದ ಗುಜರಾತ್‌ ತಂಡ 16.4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 153 ರನ್‌ಗಳಿಸಿ ಗೆಲುವಿನ ನಗೆ ಬೀರಿತು.

ಆರಂಭಿಕ ಬ್ಯಾಟರ್‌ ಸಾಯಿ ಸುದರ್ಶನ್‌ 5(9) ಹಾಗೂ ಬಟ್ಲರ್‌ ವಿಕೆಟ್‌ ಬಳಿಕ ಒಂದಾದ ನಾಯಕ ಶುಭಮನ್‌ ಗಿಲ್‌ 61(43)* ಹಾಗೂ ವಾಷಿಂಗ್ಟನ್‌ ಸುಂದರ್‌ 49(29) ರನ್‌ಗಳ ಕಾಣಿಕೆ ನೀಡಿ ತಂಡವನ್ನು ಗೆಲುವಿನ ಸನಿಹ ತಂದರು. ಕೊನೆಯಲ್ಲಿ ರುದರ್‌ಫೋರ್ಡ್‌ 35(16)* ರನ್‌ ಬಾರಿಸುವ ಮೂಲಕ ಗುಜರಾತ್‌ ತಂಡಕ್ಕೆ ಗೆಲುವು ತಂದುಕೊಟ್ಟರು.

ಹೈದರಾಬಾದ್‌ ಪರ ಮೊಹಮ್ಮದ್‌ ಶಮಿ 2 ವಿಕೆಟ್‌ ಪಡೆದರೆ, ಪ್ಯಾಟ್‌ ಕಮಿನ್ಸ್‌ ಒಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

2 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

2 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

2 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

2 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago