ಮುಂಬೈ: ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಏಪ್ರಿಲ್ 7 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ನಡೆಯುವ ಪಂದ್ಯದಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಮುಂಬೈ ಪರವಾಗಿ ಆಡಲಿದ್ದಾರೆ ಎಂದು ತಂಡದ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಮಾಹಿತಿ ನೀಡಿದ್ದಾರೆ.
ಗಾಯದಿಂದ ಕೆಲವು ತಿಂಗಳಿಂದ ಕ್ರಿಕೆಟ್ನಿಂದ ದೂರವಿದ್ದ ಬೂಮ್ರಾ, ಈಗ ಚುಟುಕು ಐಪಿಎಲ್ನಲ್ಲಿ ಆಡಲು ಸಜ್ಜಾಗಿದ್ದು, ಇಂದು ಅಭ್ಯಾಸವನ್ನು ನಡೆಸಿದ್ದಾರೆ ಎಂದು ಮಹೇಲಾ ಜಯವರ್ಧನೆ ತಿಳಿಸಿದ್ದಾರೆ.
ಬೂಮ್ರಾ ಪ್ರವೇಶದಿಂದ ತಂಡದ ಬೌಲಿಂಗ್ ವಿಭಾಗ ಗಟ್ಟಿಯಾಗಿದ್ದು, ಈಗ ತಂಡದಲ್ಲಿ ಯಾವುದೇ ಆಟಗಾರರಿಗೆ ಗಾಯದ ಆತಂಕವಿಲ್ಲ. ಮುಂದಿನ ಪಂದ್ಯಗಳಲ್ಲಿ ಎಲ್ಲಾ ವಿಭಾಗದಲ್ಲೂ ಪೂರ್ತಿ ತಂಡವಾಗಿ ಮುಂಬೈ ಕಣಕ್ಕಿಳಿಯಲಿದೆ ಎಂದರು.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಸ್ಕಾರ್ ಸರಣಿಯ ನಂತರ ಬೆನ್ನು ನೋವಿಗೆ ತುತ್ತಾಗಿದ್ದ ಬೂಮ್ರಾ, ಬಳಿಕ ವಿಶ್ರಾಂತಿಯಲ್ಲಿದ್ದರು. ಜೊತೆಗೆ ಗಾಯದಿಂದಾಗಿ ಇಂಗ್ಲೆಂಡ್ ವಿರುದ್ಧದ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿ ಏಕದಿನ ಸರಣಿಯಿಂದಲೂ ಬೂಮ್ರಾ ಹೊರಗುಳಿದಿದ್ದರು.
ಮುಂಬೈ ಹಾಗೂ ಆರ್ಸಿಬಿ ನಡುವಣ ಪಂದ್ಯವು ಏ.7 ರಂದು ವಾಂಖೆಡೆ ಮೈದಾನದಲ್ಲಿ ನಡೆಯಲಿದೆ.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…