ಕೊಲ್ಕತ್ತಾ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಕ್ರಿಕೆಟ್ ಟೂರ್ನಿಯ ಆರಂಭಿಕ ಪಂದ್ಯ ನಡೆಯುವುದು ಅನುಮಾನವಾಗಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯುವ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಆತಂಕವಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪಶ್ಚಿಮ ಬಂಗಾಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾರ್ಚ್20 ರಿಂದ 22 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ನೆನ್ನೆ ಸಂಜೆ 5ರ ವೇಳೆ ಉಭಯ ತಂಡಗಳು ಅಭ್ಯಾಸದಲ್ಲಿ ತೊಡಗಿದ್ದ ಸಂದರ್ಭ ತುಂತುರು ಮಳೆ ಶುರುವಾಗಿದೆ. ಆದ್ದರಿಂದ, ಇಂದಿನ ಉದ್ಘಾಟನಾ ಕಾರ್ಯಕ್ರಮದ ವೇಳೆ ಮಳೆ ಅಡ್ಡಿಪಡಿಸುವ ಆತಂಕಗಳಿವೆ.
ಐಪಿಎಲ್ 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಹುಭಾಷಾ ಗಾಯಕಿ ಶ್ರೇಯಾ ಘೋಷಾಲ್, ಕರಣ್ ಔಜ್ಲಾ ಮತ್ತು ಬಾಲಿವುಡ್ ಸ್ಟಾರ್ ನಟಿ ದಿಶಾ ಪಟಾನಿ ಸಂಗೀತ ಪ್ರದರ್ಶನ ನೀಡಲಿದ್ದಾರೆ.
ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದು ಅಂಕ ಸಿಗಲಿದೆ.
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…