ಕ್ರೀಡೆ

IPL2025: ಪಂಜಾಬ್‌ ವಿರುದ್ಧ ರಾಜಸ್ತಾನಕ್ಕೆ 50 ರನ್‌ಗಳ ಜಯ

ಚಂಡೀಗಢ: ಯಶಸ್ವಿ ಜೈಸ್ವಾಲ್‌ 67(45) ಅಬ್ಬರದ ಅರ್ಧಶತಕ ಹಾಗೂ ಬೌಲರ್‌ಗಳ ಬಿಗು ಬೌಲಿಂಗ್‌ ದಾಳಿಯಿಂದ ರಾಜಸ್ತಾನ ರಾಯಲ್ಸ್‌ ತಂಡ ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಮಹಾರಾಜ ಯದುವಿಂದ್ರ ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್‌ ಅರಂಭಿಸಿದ ರಾಜಸ್ತಾನ ರಾಯಲ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 205 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು.

ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್‌ 38(26) ಹಾಗೂ ಜೈಸ್ವಾಲ್‌ 67(45) ಉತ್ತಮ ಆರಂಭ ಒದಗಿಸಿದರು. ಸಂಜು ಔಟಾದ ನಂತರ ಕ್ರೀಸ್‌ಗೆ ಬಂದ ರಿಯಾನ್‌ ಪರಾಗ್‌ 43(25) ಭರ್ಜರಿ ಬ್ಯಾಟಿಂಗ್‌ ಮಾಡುವ ಮೂಲಕ ರಾಜಸ್ತಾನ 200ರ ಗಡಿ ತಲುಪಲು ನೆರವಾದರು. ಉಳಿದಂತೆ ನಿತೀಶ್‌ ರಾಣಾ 12(7), ಹೆಟ್ಮೆಯರ್‌ 20(12), ಧ್ರುವ ಜುರೆಲ್‌ 13(5) ರನ್‌ಗಳ ಕಾಣಿಕೆ ನೀಡಿದರು.

ಪಂಜಾಬ್‌ ಪರ ಲಾಕಿ ಫರ್ಗೂಸನ್‌ 2 ವಿಕೆಟ್‌ ಪಡೆದರೆ, ಅರ್ಷದೀಪ್‌ ಸಿಂಗ್‌ ಹಾಗೂ ಮಾರ್ಕೊ ಯಾನ್ಸನ್‌ ತಲಾ ಒಂದು ವಿಕೆಟ್‌ ಪಡೆದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಂಜಾಬ್‌ ತಂಡ ರಾಜಸ್ತಾನದ ಬಿಗಿ ಬೌಲಿಂಗ್‌ ದಾಳಿಗೆ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 155 ರನ್‌ಗಳಿಸಲಷ್ಟೇ ಶಕ್ತವಾಯಿತು.

ಪಂಜಾಬ್‌ ಪರ ನೆಹಾಲ್‌ ವಡೇರಾ 62(41) ಹಾಗೂ ಗ್ಲೆನ್‌ ಮ್ಯಾಕ್ಸವೆಲ್‌ 30(21) ಗೆಲುವಿನ ಹೋರಾಟದ ಪ್ರದರ್ಶನ ನೀಡಿದರು. ಆದರೆ, ತಂಡವನ್ನು ಗೆಲುವಿನ ದಡ ತಲುಪಿಸುವಲ್ಲಿ ವಿಫಲವಾದರು.

ರಾಜಸ್ತಾನ ತಂಡದ ಪರ ಬಿಗಿ ಬೌಲಿಂಗ್‌ ದಾಳಿ ನಡೆಸಿದ ಜೋಫ್ರಾ ಅರ್ಚರ್‌ 3 ವಿಕೆಟ್‌, ಸಂದೀಪ್‌ ಶರ್ಮಾ ಹಾಗೂ ಮಹೀಶಾ ತೀಕ್ಷಣಾ ತಲಾ ಎರಡು ವಿಕೆಟ್‌ ಪಡೆದು ಮಿಂಚಿದರು.

 

 

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

4 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

4 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

4 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

6 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

6 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

6 hours ago