ಕ್ರೀಡೆ

IPL2025: ಪಂಜಾಬ್‌ ವಿರುದ್ಧ ರಾಜಸ್ತಾನಕ್ಕೆ 50 ರನ್‌ಗಳ ಜಯ

ಚಂಡೀಗಢ: ಯಶಸ್ವಿ ಜೈಸ್ವಾಲ್‌ 67(45) ಅಬ್ಬರದ ಅರ್ಧಶತಕ ಹಾಗೂ ಬೌಲರ್‌ಗಳ ಬಿಗು ಬೌಲಿಂಗ್‌ ದಾಳಿಯಿಂದ ರಾಜಸ್ತಾನ ರಾಯಲ್ಸ್‌ ತಂಡ ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಮಹಾರಾಜ ಯದುವಿಂದ್ರ ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್‌ ಅರಂಭಿಸಿದ ರಾಜಸ್ತಾನ ರಾಯಲ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 205 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು.

ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್‌ 38(26) ಹಾಗೂ ಜೈಸ್ವಾಲ್‌ 67(45) ಉತ್ತಮ ಆರಂಭ ಒದಗಿಸಿದರು. ಸಂಜು ಔಟಾದ ನಂತರ ಕ್ರೀಸ್‌ಗೆ ಬಂದ ರಿಯಾನ್‌ ಪರಾಗ್‌ 43(25) ಭರ್ಜರಿ ಬ್ಯಾಟಿಂಗ್‌ ಮಾಡುವ ಮೂಲಕ ರಾಜಸ್ತಾನ 200ರ ಗಡಿ ತಲುಪಲು ನೆರವಾದರು. ಉಳಿದಂತೆ ನಿತೀಶ್‌ ರಾಣಾ 12(7), ಹೆಟ್ಮೆಯರ್‌ 20(12), ಧ್ರುವ ಜುರೆಲ್‌ 13(5) ರನ್‌ಗಳ ಕಾಣಿಕೆ ನೀಡಿದರು.

ಪಂಜಾಬ್‌ ಪರ ಲಾಕಿ ಫರ್ಗೂಸನ್‌ 2 ವಿಕೆಟ್‌ ಪಡೆದರೆ, ಅರ್ಷದೀಪ್‌ ಸಿಂಗ್‌ ಹಾಗೂ ಮಾರ್ಕೊ ಯಾನ್ಸನ್‌ ತಲಾ ಒಂದು ವಿಕೆಟ್‌ ಪಡೆದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಂಜಾಬ್‌ ತಂಡ ರಾಜಸ್ತಾನದ ಬಿಗಿ ಬೌಲಿಂಗ್‌ ದಾಳಿಗೆ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 155 ರನ್‌ಗಳಿಸಲಷ್ಟೇ ಶಕ್ತವಾಯಿತು.

ಪಂಜಾಬ್‌ ಪರ ನೆಹಾಲ್‌ ವಡೇರಾ 62(41) ಹಾಗೂ ಗ್ಲೆನ್‌ ಮ್ಯಾಕ್ಸವೆಲ್‌ 30(21) ಗೆಲುವಿನ ಹೋರಾಟದ ಪ್ರದರ್ಶನ ನೀಡಿದರು. ಆದರೆ, ತಂಡವನ್ನು ಗೆಲುವಿನ ದಡ ತಲುಪಿಸುವಲ್ಲಿ ವಿಫಲವಾದರು.

ರಾಜಸ್ತಾನ ತಂಡದ ಪರ ಬಿಗಿ ಬೌಲಿಂಗ್‌ ದಾಳಿ ನಡೆಸಿದ ಜೋಫ್ರಾ ಅರ್ಚರ್‌ 3 ವಿಕೆಟ್‌, ಸಂದೀಪ್‌ ಶರ್ಮಾ ಹಾಗೂ ಮಹೀಶಾ ತೀಕ್ಷಣಾ ತಲಾ ಎರಡು ವಿಕೆಟ್‌ ಪಡೆದು ಮಿಂಚಿದರು.

 

 

ಆಂದೋಲನ ಡೆಸ್ಕ್

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

7 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

15 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago