ಕ್ರೀಡೆ

IPL2025: ಚೆನ್ನೈ ವಿರುದ್ಧ ಭರ್ಜರಿ ಜಯ ದಾಖಲಿಸಿದ ಆರ್‌ಸಿಬಿ

ಚೆನ್ನೈ: ಐಪಿಎಲ್‌ನ 18ನೇ ಆವೃತ್ತಿಯ ಚೆನ್ನೈ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 50 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಆ ಮೂಲಕ ಚೆಪಾಕ್‌ ಮೈದಾನದಲ್ಲಿ 17 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದೆ.

ಚೆನ್ನೈನ ಚೆಪಾಕ್‌ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಸಿಎಸ್‌ಕೆ ತಂಡ ಎದುರಾಳಿ ಆರ್‌ಸಿಬಿಯನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಅದರಂತೆ ಬ್ಯಾಟಿಂಗ್‌ ಆರಂಭಿಸಿದ ಬೆಂಗಳೂರು ತಂಡದ ನಾಯಕ ರಜತ್‌ ಪಾಟೀದಾರ್‌ 51(32) ಅವರ ಅರ್ಧಶತಕದ ನೆರವಿನ ಜೊತೆಗೆ ಫಿಲ್‌ ಸಾಲ್ಟ್‌ 32(16), ವಿರಾಟ್‌ ಕೊಹ್ಲಿ 31(30), ದೇವದತ್‌ ಪಡಿಕ್ಕಲ್‌ 27(14), ಕೊನೆಯಲ್ಲಿ ಟಿಮ್‌ ಡೆವಿಡ್‌ 22(8) ಅವರ ಆಟದ ನೆರವಿನಿಂದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 196 ರನ್‌ಗಳ ಸವಾಲಿನ ಮೊತ್ತ ಪೇರಿಸಿತು.

ಚೆನ್ನೈ ಪರ ನೂರ್‌ ಅಹ್ಮದ್‌ 3 ವಿಕೆಟ್‌ ಪಡೆದರೆ ಮಥೀಶಾ ಪತಿರಾನ 2 ವಿಕೆಟ್‌, ಅಶ್ವಿನ್‌ ಹಾಗೂ ಖಲೀಲ್‌ ಅಹ್ಮದ್‌ ತಲಾ ಒಂದು ವಿಕೆಟ್‌ ಪಡೆದರು.

ಈ ಗುರಿ ಬೆನ್ನಟ್ಟಿದ ಚೆನ್ನೈ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 146 ರನ್‌ಗಳಿಸಲಷ್ಟೇ ಶಕ್ತವಾಯಿತು. ಚೆನ್ನೈ ಪರ ಆರಂಭಿಕ ಬ್ಯಾಟರ್‌ ರಚಿನ್‌ ರವೀಂದ್ರ 41(31) ರನ್‌ಗಳಿಸಿ ಗೆಲುವಿನ ಆಸೆ ಚಿಗುರಿಸಿದ್ದರು. ಆದರೆ, ಯಶ್‌ ದಯಾಳ್‌ ಅವರ ಬೌಲಿಂಗ್‌ನಲ್ಲಿ ಓಟಾಗುವ ಮೂಲಕ ಚೆನ್ನೈನ ಗೆಲುವಿನ ಆಸೆ ಕಮರಿತು. ಕೊನೆಯಲ್ಲಿ ಮಹೇಂದ್ರ ಸಿಂಗ್‌ ಧೋನಿ 16 ಎಸೆತಗಳಲ್ಲಿ 30 ರನ್‌ಗಳಿಸಿ ಔಟಾಗದೇ ಉಳಿದರು.

ಆರ್‌ಸಿಬಿ ತಂಡದ ಪರ ಜೋಶ್‌ ಹ್ಯಾಜಲ್‌ವುಡ್‌ 3 ವಿಕೆಟ್‌ ಪಡೆದರೆ, ಯಶ್‌ ದಯಾಳ್‌ ಹಾಗೂ ಲಿಯಾಮ್‌ ಲಿವಿಂಗ್‌ಸ್ಟೋನ್‌ ತಲಾ ಎರಡು ವಿಕೆಟ್‌ ಗಳಿಸಿದರು.

 

ಆಂದೋಲನ ಡೆಸ್ಕ್

Recent Posts

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

30 mins ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

36 mins ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

39 mins ago

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…

43 mins ago

ಖಮೇನಿ ಹತ್ಯೆಯಿಂದ ಮಧ್ಯಪ್ರಾಚ್ಯದಲ್ಲಿ ಅರಾಜಕತೆ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…

48 mins ago

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

1 hour ago