ಕ್ರೀಡೆ

IPL2025: ಚೆನ್ನೈ ವಿರುದ್ಧ ಭರ್ಜರಿ ಜಯ ದಾಖಲಿಸಿದ ಆರ್‌ಸಿಬಿ

ಚೆನ್ನೈ: ಐಪಿಎಲ್‌ನ 18ನೇ ಆವೃತ್ತಿಯ ಚೆನ್ನೈ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 50 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಆ ಮೂಲಕ ಚೆಪಾಕ್‌ ಮೈದಾನದಲ್ಲಿ 17 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದೆ.

ಚೆನ್ನೈನ ಚೆಪಾಕ್‌ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಸಿಎಸ್‌ಕೆ ತಂಡ ಎದುರಾಳಿ ಆರ್‌ಸಿಬಿಯನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಅದರಂತೆ ಬ್ಯಾಟಿಂಗ್‌ ಆರಂಭಿಸಿದ ಬೆಂಗಳೂರು ತಂಡದ ನಾಯಕ ರಜತ್‌ ಪಾಟೀದಾರ್‌ 51(32) ಅವರ ಅರ್ಧಶತಕದ ನೆರವಿನ ಜೊತೆಗೆ ಫಿಲ್‌ ಸಾಲ್ಟ್‌ 32(16), ವಿರಾಟ್‌ ಕೊಹ್ಲಿ 31(30), ದೇವದತ್‌ ಪಡಿಕ್ಕಲ್‌ 27(14), ಕೊನೆಯಲ್ಲಿ ಟಿಮ್‌ ಡೆವಿಡ್‌ 22(8) ಅವರ ಆಟದ ನೆರವಿನಿಂದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 196 ರನ್‌ಗಳ ಸವಾಲಿನ ಮೊತ್ತ ಪೇರಿಸಿತು.

ಚೆನ್ನೈ ಪರ ನೂರ್‌ ಅಹ್ಮದ್‌ 3 ವಿಕೆಟ್‌ ಪಡೆದರೆ ಮಥೀಶಾ ಪತಿರಾನ 2 ವಿಕೆಟ್‌, ಅಶ್ವಿನ್‌ ಹಾಗೂ ಖಲೀಲ್‌ ಅಹ್ಮದ್‌ ತಲಾ ಒಂದು ವಿಕೆಟ್‌ ಪಡೆದರು.

ಈ ಗುರಿ ಬೆನ್ನಟ್ಟಿದ ಚೆನ್ನೈ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 146 ರನ್‌ಗಳಿಸಲಷ್ಟೇ ಶಕ್ತವಾಯಿತು. ಚೆನ್ನೈ ಪರ ಆರಂಭಿಕ ಬ್ಯಾಟರ್‌ ರಚಿನ್‌ ರವೀಂದ್ರ 41(31) ರನ್‌ಗಳಿಸಿ ಗೆಲುವಿನ ಆಸೆ ಚಿಗುರಿಸಿದ್ದರು. ಆದರೆ, ಯಶ್‌ ದಯಾಳ್‌ ಅವರ ಬೌಲಿಂಗ್‌ನಲ್ಲಿ ಓಟಾಗುವ ಮೂಲಕ ಚೆನ್ನೈನ ಗೆಲುವಿನ ಆಸೆ ಕಮರಿತು. ಕೊನೆಯಲ್ಲಿ ಮಹೇಂದ್ರ ಸಿಂಗ್‌ ಧೋನಿ 16 ಎಸೆತಗಳಲ್ಲಿ 30 ರನ್‌ಗಳಿಸಿ ಔಟಾಗದೇ ಉಳಿದರು.

ಆರ್‌ಸಿಬಿ ತಂಡದ ಪರ ಜೋಶ್‌ ಹ್ಯಾಜಲ್‌ವುಡ್‌ 3 ವಿಕೆಟ್‌ ಪಡೆದರೆ, ಯಶ್‌ ದಯಾಳ್‌ ಹಾಗೂ ಲಿಯಾಮ್‌ ಲಿವಿಂಗ್‌ಸ್ಟೋನ್‌ ತಲಾ ಎರಡು ವಿಕೆಟ್‌ ಗಳಿಸಿದರು.

 

ಆಂದೋಲನ ಡೆಸ್ಕ್

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

7 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

8 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

9 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

10 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

11 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

11 hours ago