ಚೆನ್ನೈ: ಐಪಿಎಲ್ನ 18ನೇ ಆವೃತ್ತಿಯ ಚೆನ್ನೈ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 50 ರನ್ಗಳ ಭರ್ಜರಿ ಜಯ ದಾಖಲಿಸಿದೆ. ಆ ಮೂಲಕ ಚೆಪಾಕ್ ಮೈದಾನದಲ್ಲಿ 17 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದೆ.
ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ತಂಡ ಎದುರಾಳಿ ಆರ್ಸಿಬಿಯನ್ನು ಬ್ಯಾಟಿಂಗ್ ಆಹ್ವಾನಿಸಿದರು.
ಅದರಂತೆ ಬ್ಯಾಟಿಂಗ್ ಆರಂಭಿಸಿದ ಬೆಂಗಳೂರು ತಂಡದ ನಾಯಕ ರಜತ್ ಪಾಟೀದಾರ್ 51(32) ಅವರ ಅರ್ಧಶತಕದ ನೆರವಿನ ಜೊತೆಗೆ ಫಿಲ್ ಸಾಲ್ಟ್ 32(16), ವಿರಾಟ್ ಕೊಹ್ಲಿ 31(30), ದೇವದತ್ ಪಡಿಕ್ಕಲ್ 27(14), ಕೊನೆಯಲ್ಲಿ ಟಿಮ್ ಡೆವಿಡ್ 22(8) ಅವರ ಆಟದ ನೆರವಿನಿಂದ ಆರ್ಸಿಬಿ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್ಗಳ ಸವಾಲಿನ ಮೊತ್ತ ಪೇರಿಸಿತು.
ಚೆನ್ನೈ ಪರ ನೂರ್ ಅಹ್ಮದ್ 3 ವಿಕೆಟ್ ಪಡೆದರೆ ಮಥೀಶಾ ಪತಿರಾನ 2 ವಿಕೆಟ್, ಅಶ್ವಿನ್ ಹಾಗೂ ಖಲೀಲ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.
ಈ ಗುರಿ ಬೆನ್ನಟ್ಟಿದ ಚೆನ್ನೈ ತಂಡ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 146 ರನ್ಗಳಿಸಲಷ್ಟೇ ಶಕ್ತವಾಯಿತು. ಚೆನ್ನೈ ಪರ ಆರಂಭಿಕ ಬ್ಯಾಟರ್ ರಚಿನ್ ರವೀಂದ್ರ 41(31) ರನ್ಗಳಿಸಿ ಗೆಲುವಿನ ಆಸೆ ಚಿಗುರಿಸಿದ್ದರು. ಆದರೆ, ಯಶ್ ದಯಾಳ್ ಅವರ ಬೌಲಿಂಗ್ನಲ್ಲಿ ಓಟಾಗುವ ಮೂಲಕ ಚೆನ್ನೈನ ಗೆಲುವಿನ ಆಸೆ ಕಮರಿತು. ಕೊನೆಯಲ್ಲಿ ಮಹೇಂದ್ರ ಸಿಂಗ್ ಧೋನಿ 16 ಎಸೆತಗಳಲ್ಲಿ 30 ರನ್ಗಳಿಸಿ ಔಟಾಗದೇ ಉಳಿದರು.
ಆರ್ಸಿಬಿ ತಂಡದ ಪರ ಜೋಶ್ ಹ್ಯಾಜಲ್ವುಡ್ 3 ವಿಕೆಟ್ ಪಡೆದರೆ, ಯಶ್ ದಯಾಳ್ ಹಾಗೂ ಲಿಯಾಮ್ ಲಿವಿಂಗ್ಸ್ಟೋನ್ ತಲಾ ಎರಡು ವಿಕೆಟ್ ಗಳಿಸಿದರು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…