ಕ್ರೀಡೆ

IPL2025: ಚೆನ್ನೈ ವಿರುದ್ಧ ಭರ್ಜರಿ ಜಯ ದಾಖಲಿಸಿದ ಆರ್‌ಸಿಬಿ

ಚೆನ್ನೈ: ಐಪಿಎಲ್‌ನ 18ನೇ ಆವೃತ್ತಿಯ ಚೆನ್ನೈ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 50 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಆ ಮೂಲಕ ಚೆಪಾಕ್‌ ಮೈದಾನದಲ್ಲಿ 17 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದೆ.

ಚೆನ್ನೈನ ಚೆಪಾಕ್‌ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಸಿಎಸ್‌ಕೆ ತಂಡ ಎದುರಾಳಿ ಆರ್‌ಸಿಬಿಯನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಅದರಂತೆ ಬ್ಯಾಟಿಂಗ್‌ ಆರಂಭಿಸಿದ ಬೆಂಗಳೂರು ತಂಡದ ನಾಯಕ ರಜತ್‌ ಪಾಟೀದಾರ್‌ 51(32) ಅವರ ಅರ್ಧಶತಕದ ನೆರವಿನ ಜೊತೆಗೆ ಫಿಲ್‌ ಸಾಲ್ಟ್‌ 32(16), ವಿರಾಟ್‌ ಕೊಹ್ಲಿ 31(30), ದೇವದತ್‌ ಪಡಿಕ್ಕಲ್‌ 27(14), ಕೊನೆಯಲ್ಲಿ ಟಿಮ್‌ ಡೆವಿಡ್‌ 22(8) ಅವರ ಆಟದ ನೆರವಿನಿಂದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 196 ರನ್‌ಗಳ ಸವಾಲಿನ ಮೊತ್ತ ಪೇರಿಸಿತು.

ಚೆನ್ನೈ ಪರ ನೂರ್‌ ಅಹ್ಮದ್‌ 3 ವಿಕೆಟ್‌ ಪಡೆದರೆ ಮಥೀಶಾ ಪತಿರಾನ 2 ವಿಕೆಟ್‌, ಅಶ್ವಿನ್‌ ಹಾಗೂ ಖಲೀಲ್‌ ಅಹ್ಮದ್‌ ತಲಾ ಒಂದು ವಿಕೆಟ್‌ ಪಡೆದರು.

ಈ ಗುರಿ ಬೆನ್ನಟ್ಟಿದ ಚೆನ್ನೈ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 146 ರನ್‌ಗಳಿಸಲಷ್ಟೇ ಶಕ್ತವಾಯಿತು. ಚೆನ್ನೈ ಪರ ಆರಂಭಿಕ ಬ್ಯಾಟರ್‌ ರಚಿನ್‌ ರವೀಂದ್ರ 41(31) ರನ್‌ಗಳಿಸಿ ಗೆಲುವಿನ ಆಸೆ ಚಿಗುರಿಸಿದ್ದರು. ಆದರೆ, ಯಶ್‌ ದಯಾಳ್‌ ಅವರ ಬೌಲಿಂಗ್‌ನಲ್ಲಿ ಓಟಾಗುವ ಮೂಲಕ ಚೆನ್ನೈನ ಗೆಲುವಿನ ಆಸೆ ಕಮರಿತು. ಕೊನೆಯಲ್ಲಿ ಮಹೇಂದ್ರ ಸಿಂಗ್‌ ಧೋನಿ 16 ಎಸೆತಗಳಲ್ಲಿ 30 ರನ್‌ಗಳಿಸಿ ಔಟಾಗದೇ ಉಳಿದರು.

ಆರ್‌ಸಿಬಿ ತಂಡದ ಪರ ಜೋಶ್‌ ಹ್ಯಾಜಲ್‌ವುಡ್‌ 3 ವಿಕೆಟ್‌ ಪಡೆದರೆ, ಯಶ್‌ ದಯಾಳ್‌ ಹಾಗೂ ಲಿಯಾಮ್‌ ಲಿವಿಂಗ್‌ಸ್ಟೋನ್‌ ತಲಾ ಎರಡು ವಿಕೆಟ್‌ ಗಳಿಸಿದರು.

 

ಆಂದೋಲನ ಡೆಸ್ಕ್

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

5 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

5 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

5 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

6 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

15 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

15 hours ago