ಕ್ರೀಡೆ

IPL2025: ಸನ್‌ ರೈಸರ್ಸ್‌ಗೆ ರಾಯಲ್ಸ್‌ ಸವಾಲು

ಹೈದರಾಬಾದ್‌: ಬಲಿಷ್ಠ ಬ್ಯಾಟಿಂಗ್‌ ಪಡೆಯನ್ನು ಹೊಂದಿರುವ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 18ನೇ ಆವೃತ್ತಿಯಲ್ಲಿ ಭಾನುವಾರ ರಾಜಸ್ಥಾನ ರಾಯಲ್ಸ್‌ ತಂಡವನ್ನು ಎದುರಿಸಲಿದೆ.

ಟ್ರಾವಿಸ್‌ ಹೆಡ್‌, ಅಭಿಷೇಕ್‌ ಶರ್ಮಾ, ಹೆನ್ರಿಕ್‌ ಕ್ಲಾಸೆನ್‌ ನಂತಹ ಸ್ಪೋಟಕ ಬ್ಯಾಟರ್‌ಗಳನ್ನು ಹೊಂದಿರುವ ಅತಿಥೇಯ ತಂಡವು ಬೃಹತ್‌ ಮೊತ್ತ ಗಳಿಸುವ ನಿರೀಕ್ಷೆಯಲ್ಲಿದೆ.

ಇನ್ನು ಬೌಲಿಂಗ್‌ ವಿಭಾಗದಲ್ಲಿ ಅನುಭವಿಗಳಾದ ನಾಯಕ ಪ್ಯಾಟ್‌ ಕಮಿನ್ಸ್‌, ಮೊಹಮ್ಮದ್‌ ಶಮಿ, ಆಡಂ ಜಂಪಾ ಅವರಿದ್ದು ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ.

ಇತ್ತ ರಾಜಸ್ಥಾನ ತಂಡದಿಂದ ಇಂಗ್ಲೆಂಡ್‌ನ ಜೋಸ್‌ ಬಟ್ಲರ್‌ ಅವರನ್ನು ಕೈಬಿಟ್ಟಿರುವುದರಿಂದ ಜೊತೆಗೆ ಸಂಜು ಸ್ಯಾಮ್ಸನ್‌ ಬೆರಳಿನ ಗಾಯದಿಂದ ಈಗ ಚೇತರಿಸಿಕೊಂಡಿರುವ ಕಾರಣ ಬ್ಯಾಟಿಂಗ್‌ ಬಲ ಸ್ವಲ್ಪ ಕಡಿಮೆಯಾಗಿದೆ. ಹೀಗಾಗಿ, ಶಿಮ್ರಾನ್‌ ಹೆಟ್ಮೆಯರ್‌, ಧ್ರುವ್‌ ಜುರೆಲ್‌, ನಿತೀಶ್‌ ರಾಣಾ ಮತ್ತು ಯಶಸ್ವಿ ಜೈಸ್ವಾಲ್‌ ಅವರ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

ಪಂದ್ಯ ಆರಂಭ: ಮಧ್ಯಾಹ್ನ 3.30

ಸ್ಥಳ: ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್‌

ನೇರ ಪ್ರಸಾರ: ಜಿಯೊ ಹಾಟ್‌ಸ್ಟಾರ್‌

 

 

ಆಂದೋಲನ ಡೆಸ್ಕ್

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

2 hours ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

4 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

4 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

7 hours ago