ಕ್ರೀಡೆ

IPL2025: ಸನ್‌ ರೈಸರ್ಸ್‌ಗೆ ರಾಯಲ್ಸ್‌ ಸವಾಲು

ಹೈದರಾಬಾದ್‌: ಬಲಿಷ್ಠ ಬ್ಯಾಟಿಂಗ್‌ ಪಡೆಯನ್ನು ಹೊಂದಿರುವ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 18ನೇ ಆವೃತ್ತಿಯಲ್ಲಿ ಭಾನುವಾರ ರಾಜಸ್ಥಾನ ರಾಯಲ್ಸ್‌ ತಂಡವನ್ನು ಎದುರಿಸಲಿದೆ.

ಟ್ರಾವಿಸ್‌ ಹೆಡ್‌, ಅಭಿಷೇಕ್‌ ಶರ್ಮಾ, ಹೆನ್ರಿಕ್‌ ಕ್ಲಾಸೆನ್‌ ನಂತಹ ಸ್ಪೋಟಕ ಬ್ಯಾಟರ್‌ಗಳನ್ನು ಹೊಂದಿರುವ ಅತಿಥೇಯ ತಂಡವು ಬೃಹತ್‌ ಮೊತ್ತ ಗಳಿಸುವ ನಿರೀಕ್ಷೆಯಲ್ಲಿದೆ.

ಇನ್ನು ಬೌಲಿಂಗ್‌ ವಿಭಾಗದಲ್ಲಿ ಅನುಭವಿಗಳಾದ ನಾಯಕ ಪ್ಯಾಟ್‌ ಕಮಿನ್ಸ್‌, ಮೊಹಮ್ಮದ್‌ ಶಮಿ, ಆಡಂ ಜಂಪಾ ಅವರಿದ್ದು ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ.

ಇತ್ತ ರಾಜಸ್ಥಾನ ತಂಡದಿಂದ ಇಂಗ್ಲೆಂಡ್‌ನ ಜೋಸ್‌ ಬಟ್ಲರ್‌ ಅವರನ್ನು ಕೈಬಿಟ್ಟಿರುವುದರಿಂದ ಜೊತೆಗೆ ಸಂಜು ಸ್ಯಾಮ್ಸನ್‌ ಬೆರಳಿನ ಗಾಯದಿಂದ ಈಗ ಚೇತರಿಸಿಕೊಂಡಿರುವ ಕಾರಣ ಬ್ಯಾಟಿಂಗ್‌ ಬಲ ಸ್ವಲ್ಪ ಕಡಿಮೆಯಾಗಿದೆ. ಹೀಗಾಗಿ, ಶಿಮ್ರಾನ್‌ ಹೆಟ್ಮೆಯರ್‌, ಧ್ರುವ್‌ ಜುರೆಲ್‌, ನಿತೀಶ್‌ ರಾಣಾ ಮತ್ತು ಯಶಸ್ವಿ ಜೈಸ್ವಾಲ್‌ ಅವರ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

ಪಂದ್ಯ ಆರಂಭ: ಮಧ್ಯಾಹ್ನ 3.30

ಸ್ಥಳ: ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್‌

ನೇರ ಪ್ರಸಾರ: ಜಿಯೊ ಹಾಟ್‌ಸ್ಟಾರ್‌

 

 

ಆಂದೋಲನ ಡೆಸ್ಕ್

Recent Posts

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

2 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

3 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

4 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

4 hours ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

4 hours ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

9 hours ago