ಕ್ರೀಡೆ

IPL2025: ಸೂಪರ್‌ ಜೈಂಟ್ಸ್‌ಗೆ ವಿರೋಚಿತ ಜಯ

ಕೊಲ್ಕತ್ತಾ: ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ವಿರುದ್ದ ನಡೆದ ಐಪಿಎಲ್‌ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ 4 ರನ್‌ಗಳ ವಿರೋಚಿತ ಜಯಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ.

ಟಾಸ್‌ ಗೆದ್ದ ಕೆಕೆಆರ್‌ ನಾಯಕ ಅಜಿಂಕ್ಯ ರಹಾನೆ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡ ಲೆಕ್ಕಚಾರವನ್ನು ಲಕ್ನೋ ಬ್ಯಾಟರ್‌ಗಳು ಉಲ್ಟಾ ಮಾಡಿದರು. ಕೆಕೆಆರ್‌ ಬೌಲರ್‌ಗಳನ್ನು ಮನಬಂದಂತೆ ದಂಡಿಸಿ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 238 ರನ್‌ಗಳ ಬೃಹತ್‌ ಗುರಿ ನೀಡಿದರು. ಈ ಮೊತ್ತ ಬೆನ್ನತ್ತಿದ ಕೊಲ್ಕತ್ತ ತಂಡ ಗೆಲುವಿನ ಸನಿಹದಲ್ಲಿ ಮುಗ್ಗರಿಸಿ 4 ರನ್‌ಗಳ ವಿರೋಚಿತ ಸೋಲು ಅನುಭವಿಸಿದರು.

ಲಕ್ನೋ ಪರ ಮಿಚೆಲ್‌ ಮಾರ್ಷ್‌ 81(48) ಹಾಗೂ ಏಡನ್‌ ಮಾರ್ಕರಮ್‌ 47(28) ಉತ್ತಮ ಆರಂಭ ಒದಗಿಸಿದರು. ಮರ್ಕರಮ್‌ ಔಟಾದ ನಂತರ ಮಾರ್ಷ್‌ ಜೊತೆಗೂಡಿದ ನಿಕೋಲಸ್‌ ಪೂರನ್‌ ಕೋಲ್ಕತ್ತಾ ತಂಡದ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ದಂಡಿಸಿದರು. ಕೇವಲ 36 ಎಸೆತಗಳಲ್ಲಿ 87 ರನ್‌ ಚಚ್ಚಿದರು. ಇವರ ಈ ಇನ್ನಿಂಗ್ಸ್‌ನಲ್ಲಿ 7 ಫೋರ್‌ ಹಾಗೂ 8 ಭರ್ಜರಿ ಸಿಕ್ಸರ್‌ಗಳು ಕಂಡುಬಂದವು.

ಬ್ಯಾಟರ್‌ಗಳ ವೈಫಲ್ಯ: ಬೃಹತ್‌ ಮೊತ್ತ ಬೆನ್ನತ್ತಿದ ಕೆಕೆಆರ್‌ಗೆ ಕ್ವಿಂಟಾನ್‌ ಡಿ ಕಾಕ್‌ 15(9) ಮತ್ತು ಸುನೀಲ್‌ ನರೈನ್‌ 30(13) ಉತ್ತಮ ಆರಂಭ ಒದಗಿಸಿದರು. ಬಳಿಕ ಸ್ಕ್ರೀಸ್‌ಗೆ ಬಂದ ನಾಯಕ ಅಜಿಂಕ್ಯ 61(35) ಜೊತಗೂಡಿದ ವೆಂಕಟೇಶ್‌ ಅಯ್ಯರ್‌ 45(29) ಪಂದ್ಯದ ಗತಿಯನ್ನೆ ಬದಲಾಯಿಸಿದರು. ಆದರೆ, ಏಳು ಓವರೆಗೆ 77 ರನ್‌ಗಳ ಅವಶ್ಯಕತೆ ಇದ್ದಾಗ ಕೋಲ್ಕತ್ತಾ ಬ್ಯಾಟರ್‌ಗಳ ಪೆವಿಲಿಯನ್‌ ಪೆರೇಡ್‌ ನಡೆಯಿತು. ರಮಣದೀಪ್‌ ಸಿಂಗ್‌ 1(2), ರಘುವಂಶಿ 5(4), ಅಂಡ್ರಿ ರಸೆಲ್‌ 7(4) ರನ್‌ಗಳಿಗೆ ಔಟಾದರು.

ಕೊನೆಯಲ್ಲಿ ರಿಂಕು ಸಿಂಗ್‌ 38(15)* ಹಾಗೂ ಹರ್ಷಿತ್‌ ರಾಣಾ 10(9)* ಹೋರಾಟ ನಡೆಸಿದರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲವಾದರು. ಅಂತಿಮವಾಗಿ ಕೊಲ್ಕತ್ತಾ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 234 ರನ್‌ಗಳಿಸಿ ವಿರೋಚಿತ ಸೋಲೊಪ್ಪಿಕೊಂಡಿತು.

ಲಕ್ನೋ ತಂಡದ ಪರ ಆಕಾಶ್‌ ದಿಪ್‌ ಮತ್ತ ಶಾರ್ದೂಲ್‌ ಠಾಕೂರ್‌ ತಲಾ 2 ವಿಕೆಟ್‌ ಪಡೆದರೆ, ಆವಿಶ್‌ ಖಾನ್‌, ದಿಗ್ವೇಶ್‌ ಸಿಂಗ್‌ ಹಾಗೂ ರವಿ ಬಿಷ್ಣೊಯಿ ತಲಾ ಒಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

11 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

11 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

11 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

11 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

11 hours ago