ಕ್ರೀಡೆ

IPL2025: ಸೂಪರ್‌ ಜೈಂಟ್ಸ್‌ಗೆ ವಿರೋಚಿತ ಜಯ

ಕೊಲ್ಕತ್ತಾ: ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ವಿರುದ್ದ ನಡೆದ ಐಪಿಎಲ್‌ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ 4 ರನ್‌ಗಳ ವಿರೋಚಿತ ಜಯಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ.

ಟಾಸ್‌ ಗೆದ್ದ ಕೆಕೆಆರ್‌ ನಾಯಕ ಅಜಿಂಕ್ಯ ರಹಾನೆ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡ ಲೆಕ್ಕಚಾರವನ್ನು ಲಕ್ನೋ ಬ್ಯಾಟರ್‌ಗಳು ಉಲ್ಟಾ ಮಾಡಿದರು. ಕೆಕೆಆರ್‌ ಬೌಲರ್‌ಗಳನ್ನು ಮನಬಂದಂತೆ ದಂಡಿಸಿ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 238 ರನ್‌ಗಳ ಬೃಹತ್‌ ಗುರಿ ನೀಡಿದರು. ಈ ಮೊತ್ತ ಬೆನ್ನತ್ತಿದ ಕೊಲ್ಕತ್ತ ತಂಡ ಗೆಲುವಿನ ಸನಿಹದಲ್ಲಿ ಮುಗ್ಗರಿಸಿ 4 ರನ್‌ಗಳ ವಿರೋಚಿತ ಸೋಲು ಅನುಭವಿಸಿದರು.

ಲಕ್ನೋ ಪರ ಮಿಚೆಲ್‌ ಮಾರ್ಷ್‌ 81(48) ಹಾಗೂ ಏಡನ್‌ ಮಾರ್ಕರಮ್‌ 47(28) ಉತ್ತಮ ಆರಂಭ ಒದಗಿಸಿದರು. ಮರ್ಕರಮ್‌ ಔಟಾದ ನಂತರ ಮಾರ್ಷ್‌ ಜೊತೆಗೂಡಿದ ನಿಕೋಲಸ್‌ ಪೂರನ್‌ ಕೋಲ್ಕತ್ತಾ ತಂಡದ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ದಂಡಿಸಿದರು. ಕೇವಲ 36 ಎಸೆತಗಳಲ್ಲಿ 87 ರನ್‌ ಚಚ್ಚಿದರು. ಇವರ ಈ ಇನ್ನಿಂಗ್ಸ್‌ನಲ್ಲಿ 7 ಫೋರ್‌ ಹಾಗೂ 8 ಭರ್ಜರಿ ಸಿಕ್ಸರ್‌ಗಳು ಕಂಡುಬಂದವು.

ಬ್ಯಾಟರ್‌ಗಳ ವೈಫಲ್ಯ: ಬೃಹತ್‌ ಮೊತ್ತ ಬೆನ್ನತ್ತಿದ ಕೆಕೆಆರ್‌ಗೆ ಕ್ವಿಂಟಾನ್‌ ಡಿ ಕಾಕ್‌ 15(9) ಮತ್ತು ಸುನೀಲ್‌ ನರೈನ್‌ 30(13) ಉತ್ತಮ ಆರಂಭ ಒದಗಿಸಿದರು. ಬಳಿಕ ಸ್ಕ್ರೀಸ್‌ಗೆ ಬಂದ ನಾಯಕ ಅಜಿಂಕ್ಯ 61(35) ಜೊತಗೂಡಿದ ವೆಂಕಟೇಶ್‌ ಅಯ್ಯರ್‌ 45(29) ಪಂದ್ಯದ ಗತಿಯನ್ನೆ ಬದಲಾಯಿಸಿದರು. ಆದರೆ, ಏಳು ಓವರೆಗೆ 77 ರನ್‌ಗಳ ಅವಶ್ಯಕತೆ ಇದ್ದಾಗ ಕೋಲ್ಕತ್ತಾ ಬ್ಯಾಟರ್‌ಗಳ ಪೆವಿಲಿಯನ್‌ ಪೆರೇಡ್‌ ನಡೆಯಿತು. ರಮಣದೀಪ್‌ ಸಿಂಗ್‌ 1(2), ರಘುವಂಶಿ 5(4), ಅಂಡ್ರಿ ರಸೆಲ್‌ 7(4) ರನ್‌ಗಳಿಗೆ ಔಟಾದರು.

ಕೊನೆಯಲ್ಲಿ ರಿಂಕು ಸಿಂಗ್‌ 38(15)* ಹಾಗೂ ಹರ್ಷಿತ್‌ ರಾಣಾ 10(9)* ಹೋರಾಟ ನಡೆಸಿದರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲವಾದರು. ಅಂತಿಮವಾಗಿ ಕೊಲ್ಕತ್ತಾ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 234 ರನ್‌ಗಳಿಸಿ ವಿರೋಚಿತ ಸೋಲೊಪ್ಪಿಕೊಂಡಿತು.

ಲಕ್ನೋ ತಂಡದ ಪರ ಆಕಾಶ್‌ ದಿಪ್‌ ಮತ್ತ ಶಾರ್ದೂಲ್‌ ಠಾಕೂರ್‌ ತಲಾ 2 ವಿಕೆಟ್‌ ಪಡೆದರೆ, ಆವಿಶ್‌ ಖಾನ್‌, ದಿಗ್ವೇಶ್‌ ಸಿಂಗ್‌ ಹಾಗೂ ರವಿ ಬಿಷ್ಣೊಯಿ ತಲಾ ಒಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

4 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

7 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

7 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

7 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

7 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

7 hours ago