ಕ್ರೀಡೆ

IPL2025: ಸೂಪರ್‌ ಜೈಂಟ್ಸ್‌ಗೆ ವಿರೋಚಿತ ಜಯ

ಕೊಲ್ಕತ್ತಾ: ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ವಿರುದ್ದ ನಡೆದ ಐಪಿಎಲ್‌ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ 4 ರನ್‌ಗಳ ವಿರೋಚಿತ ಜಯಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ.

ಟಾಸ್‌ ಗೆದ್ದ ಕೆಕೆಆರ್‌ ನಾಯಕ ಅಜಿಂಕ್ಯ ರಹಾನೆ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡ ಲೆಕ್ಕಚಾರವನ್ನು ಲಕ್ನೋ ಬ್ಯಾಟರ್‌ಗಳು ಉಲ್ಟಾ ಮಾಡಿದರು. ಕೆಕೆಆರ್‌ ಬೌಲರ್‌ಗಳನ್ನು ಮನಬಂದಂತೆ ದಂಡಿಸಿ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 238 ರನ್‌ಗಳ ಬೃಹತ್‌ ಗುರಿ ನೀಡಿದರು. ಈ ಮೊತ್ತ ಬೆನ್ನತ್ತಿದ ಕೊಲ್ಕತ್ತ ತಂಡ ಗೆಲುವಿನ ಸನಿಹದಲ್ಲಿ ಮುಗ್ಗರಿಸಿ 4 ರನ್‌ಗಳ ವಿರೋಚಿತ ಸೋಲು ಅನುಭವಿಸಿದರು.

ಲಕ್ನೋ ಪರ ಮಿಚೆಲ್‌ ಮಾರ್ಷ್‌ 81(48) ಹಾಗೂ ಏಡನ್‌ ಮಾರ್ಕರಮ್‌ 47(28) ಉತ್ತಮ ಆರಂಭ ಒದಗಿಸಿದರು. ಮರ್ಕರಮ್‌ ಔಟಾದ ನಂತರ ಮಾರ್ಷ್‌ ಜೊತೆಗೂಡಿದ ನಿಕೋಲಸ್‌ ಪೂರನ್‌ ಕೋಲ್ಕತ್ತಾ ತಂಡದ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ದಂಡಿಸಿದರು. ಕೇವಲ 36 ಎಸೆತಗಳಲ್ಲಿ 87 ರನ್‌ ಚಚ್ಚಿದರು. ಇವರ ಈ ಇನ್ನಿಂಗ್ಸ್‌ನಲ್ಲಿ 7 ಫೋರ್‌ ಹಾಗೂ 8 ಭರ್ಜರಿ ಸಿಕ್ಸರ್‌ಗಳು ಕಂಡುಬಂದವು.

ಬ್ಯಾಟರ್‌ಗಳ ವೈಫಲ್ಯ: ಬೃಹತ್‌ ಮೊತ್ತ ಬೆನ್ನತ್ತಿದ ಕೆಕೆಆರ್‌ಗೆ ಕ್ವಿಂಟಾನ್‌ ಡಿ ಕಾಕ್‌ 15(9) ಮತ್ತು ಸುನೀಲ್‌ ನರೈನ್‌ 30(13) ಉತ್ತಮ ಆರಂಭ ಒದಗಿಸಿದರು. ಬಳಿಕ ಸ್ಕ್ರೀಸ್‌ಗೆ ಬಂದ ನಾಯಕ ಅಜಿಂಕ್ಯ 61(35) ಜೊತಗೂಡಿದ ವೆಂಕಟೇಶ್‌ ಅಯ್ಯರ್‌ 45(29) ಪಂದ್ಯದ ಗತಿಯನ್ನೆ ಬದಲಾಯಿಸಿದರು. ಆದರೆ, ಏಳು ಓವರೆಗೆ 77 ರನ್‌ಗಳ ಅವಶ್ಯಕತೆ ಇದ್ದಾಗ ಕೋಲ್ಕತ್ತಾ ಬ್ಯಾಟರ್‌ಗಳ ಪೆವಿಲಿಯನ್‌ ಪೆರೇಡ್‌ ನಡೆಯಿತು. ರಮಣದೀಪ್‌ ಸಿಂಗ್‌ 1(2), ರಘುವಂಶಿ 5(4), ಅಂಡ್ರಿ ರಸೆಲ್‌ 7(4) ರನ್‌ಗಳಿಗೆ ಔಟಾದರು.

ಕೊನೆಯಲ್ಲಿ ರಿಂಕು ಸಿಂಗ್‌ 38(15)* ಹಾಗೂ ಹರ್ಷಿತ್‌ ರಾಣಾ 10(9)* ಹೋರಾಟ ನಡೆಸಿದರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲವಾದರು. ಅಂತಿಮವಾಗಿ ಕೊಲ್ಕತ್ತಾ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 234 ರನ್‌ಗಳಿಸಿ ವಿರೋಚಿತ ಸೋಲೊಪ್ಪಿಕೊಂಡಿತು.

ಲಕ್ನೋ ತಂಡದ ಪರ ಆಕಾಶ್‌ ದಿಪ್‌ ಮತ್ತ ಶಾರ್ದೂಲ್‌ ಠಾಕೂರ್‌ ತಲಾ 2 ವಿಕೆಟ್‌ ಪಡೆದರೆ, ಆವಿಶ್‌ ಖಾನ್‌, ದಿಗ್ವೇಶ್‌ ಸಿಂಗ್‌ ಹಾಗೂ ರವಿ ಬಿಷ್ಣೊಯಿ ತಲಾ ಒಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

1 hour ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

2 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

3 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

3 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

3 hours ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

4 hours ago