ಕ್ರೀಡೆ

IPL2025: ಹೈದರಾಬಾದ್‌ ವಿರುದ್ಧ ಗೆದ್ದು ಬೀಗಿದ ಸೂಪರ್‌ ಜೈಂಟ್ಸ್‌

ಹೈದರಾಬಾದ್‌: ಮಿಚೆಲ್‌ ಮಾರ್ಷ್‌ ಹಾಗೂ ನಿಕೋಲಸ್‌ ಪೂರನ್‌ ಅವರ ಅಬ್ಬರದ ಆಟದಿಂದ ಹೈದರಾಬಾದ್‌ ವಿರುದ್ಧ ಲಖನೌ ತಂಡವು 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಲಖನೌ ತಂಡದ ನಾಯಕ ರಿಷಭ್‌ ಪಂತ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡರು.

ಅದರಂತೆ ಬ್ಯಾಟಿಂಗ್‌ ಆರಂಭಿಸಿದ ಬಿಗ್‌ ಹಿಟ್ಟರ್‌ಗಳ ಹೈದರಾಬಾದ್‌ ತಂಡವು ಲಖನೌ ಬೌಲರ್‌ಗಳ ಬಿಗಿ ಬೌಲಿಂಗ್‌ ದಾಳಿಯ ನಡುವೆಯೂ 9 ವಿಕೆಟ್‌ ಕಳೆದುಕೊಂಡು 190 ರನ್‌ಗಳಿಸಿತು. ಆರಂಭಿಕ ಬ್ಯಾಟರ್‌ ಟ್ರಾವಿಸ್‌ ಹೆಡ್‌ 47(28), ನಿತೀಸ್‌ ಕುಮಾರ್‌ ರೆಡ್ಡಿ 32(28), ಹೆನ್ರಿಕ್‌ ಕ್ಲಾಸೆನ್‌ 26(17), ಅಂಕಿತ್‌ ವರ್ಮಾ 36(13), ಪ್ಯಾಟ್‌ ಕಮಿನ್ಸ್‌ 18(4) ರನ್‌ ಗಳಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಗಳಿಸಲು ನೆರವಾದರು.

ಲಖನೌ ತಂಡದ ಪರ ಅದ್ಭುತ ಬೌಲಿಂಗ್‌ ದಾಳಿ ನಡೆಸಿದ ಶಾರ್ದೂಲ್‌ ಠಾಕೂರ್‌ 34ರನ್‌ ನೀಡಿ 4 ವಿಕೆಟ್‌ ಪಡೆದರೆ ಅವೀಶ್‌ ಖಾನ್‌, ಡಿಎಸ್‌ ರತಿ, ರವಿ ಬಿಷ್ಣೊಯಿ, ಫ್ರಿನ್ಸ್‌ ಯಾದವ್‌ ತಲಾ ಒಂದು ವಿಕೆಟ್‌ ಪಡೆದರು.

ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಲಖನೌ ತಂಡದ ಆರಂಭಿಕ ಬ್ಯಾಟರ್‌ ಏಡನ್‌ ಮರ್ಕರಮ್‌ 1(4) ವಿಕೆಟ್‌ ನಂತರ ಮಿಚೆಲ್‌ ಮಾರ್ಸ್‌ 52(31) ಜೊತೆಗೋಡಿದ ನಿಕೋಲಸ್‌ ಪೂರನ್‌ 70(26) ಬಿರುಸಿನ ಆರಂಭ ಒದಗಿಸುವ ಮೂಲಕ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ಹತ್ತಿರ ಕೊಂಡೊಯ್ದರು.

ಇವರಿಬ್ಬರ ವಿಕೆಟ್‌ ನಂತರ ಕೊನೆಯಲ್ಲಿ ಡೆವಿಡ್‌ ಮಿಲ್ಲರ್‌ 13(7) ಹಾಗೂ ಅಬ್ದುಲ್‌ ಸಮದ್‌ 22(8) ಆಟದ ಜೊತೆಯೊಂದಿಗೆ ಲಖನೌ ತಂಡ 16.1 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಗೆಲುವಿನ ದಡ ಸೇರಿತು.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago