ಕ್ರೀಡೆ

IPL2025: ಹೈದರಾಬಾದ್‌ ವಿರುದ್ಧ ಗೆದ್ದು ಬೀಗಿದ ಸೂಪರ್‌ ಜೈಂಟ್ಸ್‌

ಹೈದರಾಬಾದ್‌: ಮಿಚೆಲ್‌ ಮಾರ್ಷ್‌ ಹಾಗೂ ನಿಕೋಲಸ್‌ ಪೂರನ್‌ ಅವರ ಅಬ್ಬರದ ಆಟದಿಂದ ಹೈದರಾಬಾದ್‌ ವಿರುದ್ಧ ಲಖನೌ ತಂಡವು 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಲಖನೌ ತಂಡದ ನಾಯಕ ರಿಷಭ್‌ ಪಂತ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡರು.

ಅದರಂತೆ ಬ್ಯಾಟಿಂಗ್‌ ಆರಂಭಿಸಿದ ಬಿಗ್‌ ಹಿಟ್ಟರ್‌ಗಳ ಹೈದರಾಬಾದ್‌ ತಂಡವು ಲಖನೌ ಬೌಲರ್‌ಗಳ ಬಿಗಿ ಬೌಲಿಂಗ್‌ ದಾಳಿಯ ನಡುವೆಯೂ 9 ವಿಕೆಟ್‌ ಕಳೆದುಕೊಂಡು 190 ರನ್‌ಗಳಿಸಿತು. ಆರಂಭಿಕ ಬ್ಯಾಟರ್‌ ಟ್ರಾವಿಸ್‌ ಹೆಡ್‌ 47(28), ನಿತೀಸ್‌ ಕುಮಾರ್‌ ರೆಡ್ಡಿ 32(28), ಹೆನ್ರಿಕ್‌ ಕ್ಲಾಸೆನ್‌ 26(17), ಅಂಕಿತ್‌ ವರ್ಮಾ 36(13), ಪ್ಯಾಟ್‌ ಕಮಿನ್ಸ್‌ 18(4) ರನ್‌ ಗಳಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಗಳಿಸಲು ನೆರವಾದರು.

ಲಖನೌ ತಂಡದ ಪರ ಅದ್ಭುತ ಬೌಲಿಂಗ್‌ ದಾಳಿ ನಡೆಸಿದ ಶಾರ್ದೂಲ್‌ ಠಾಕೂರ್‌ 34ರನ್‌ ನೀಡಿ 4 ವಿಕೆಟ್‌ ಪಡೆದರೆ ಅವೀಶ್‌ ಖಾನ್‌, ಡಿಎಸ್‌ ರತಿ, ರವಿ ಬಿಷ್ಣೊಯಿ, ಫ್ರಿನ್ಸ್‌ ಯಾದವ್‌ ತಲಾ ಒಂದು ವಿಕೆಟ್‌ ಪಡೆದರು.

ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಲಖನೌ ತಂಡದ ಆರಂಭಿಕ ಬ್ಯಾಟರ್‌ ಏಡನ್‌ ಮರ್ಕರಮ್‌ 1(4) ವಿಕೆಟ್‌ ನಂತರ ಮಿಚೆಲ್‌ ಮಾರ್ಸ್‌ 52(31) ಜೊತೆಗೋಡಿದ ನಿಕೋಲಸ್‌ ಪೂರನ್‌ 70(26) ಬಿರುಸಿನ ಆರಂಭ ಒದಗಿಸುವ ಮೂಲಕ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ಹತ್ತಿರ ಕೊಂಡೊಯ್ದರು.

ಇವರಿಬ್ಬರ ವಿಕೆಟ್‌ ನಂತರ ಕೊನೆಯಲ್ಲಿ ಡೆವಿಡ್‌ ಮಿಲ್ಲರ್‌ 13(7) ಹಾಗೂ ಅಬ್ದುಲ್‌ ಸಮದ್‌ 22(8) ಆಟದ ಜೊತೆಯೊಂದಿಗೆ ಲಖನೌ ತಂಡ 16.1 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಗೆಲುವಿನ ದಡ ಸೇರಿತು.

ಆಂದೋಲನ ಡೆಸ್ಕ್

Recent Posts

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

21 mins ago

ಎಲ್ಲಾ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ: ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ…

1 hour ago

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…

2 hours ago

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

3 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

3 hours ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

4 hours ago