ಕ್ರೀಡೆ

IPL2025: ಹೈದರಾಬಾದ್‌ ವಿರುದ್ಧ ಗೆದ್ದು ಬೀಗಿದ ಸೂಪರ್‌ ಜೈಂಟ್ಸ್‌

ಹೈದರಾಬಾದ್‌: ಮಿಚೆಲ್‌ ಮಾರ್ಷ್‌ ಹಾಗೂ ನಿಕೋಲಸ್‌ ಪೂರನ್‌ ಅವರ ಅಬ್ಬರದ ಆಟದಿಂದ ಹೈದರಾಬಾದ್‌ ವಿರುದ್ಧ ಲಖನೌ ತಂಡವು 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಲಖನೌ ತಂಡದ ನಾಯಕ ರಿಷಭ್‌ ಪಂತ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡರು.

ಅದರಂತೆ ಬ್ಯಾಟಿಂಗ್‌ ಆರಂಭಿಸಿದ ಬಿಗ್‌ ಹಿಟ್ಟರ್‌ಗಳ ಹೈದರಾಬಾದ್‌ ತಂಡವು ಲಖನೌ ಬೌಲರ್‌ಗಳ ಬಿಗಿ ಬೌಲಿಂಗ್‌ ದಾಳಿಯ ನಡುವೆಯೂ 9 ವಿಕೆಟ್‌ ಕಳೆದುಕೊಂಡು 190 ರನ್‌ಗಳಿಸಿತು. ಆರಂಭಿಕ ಬ್ಯಾಟರ್‌ ಟ್ರಾವಿಸ್‌ ಹೆಡ್‌ 47(28), ನಿತೀಸ್‌ ಕುಮಾರ್‌ ರೆಡ್ಡಿ 32(28), ಹೆನ್ರಿಕ್‌ ಕ್ಲಾಸೆನ್‌ 26(17), ಅಂಕಿತ್‌ ವರ್ಮಾ 36(13), ಪ್ಯಾಟ್‌ ಕಮಿನ್ಸ್‌ 18(4) ರನ್‌ ಗಳಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಗಳಿಸಲು ನೆರವಾದರು.

ಲಖನೌ ತಂಡದ ಪರ ಅದ್ಭುತ ಬೌಲಿಂಗ್‌ ದಾಳಿ ನಡೆಸಿದ ಶಾರ್ದೂಲ್‌ ಠಾಕೂರ್‌ 34ರನ್‌ ನೀಡಿ 4 ವಿಕೆಟ್‌ ಪಡೆದರೆ ಅವೀಶ್‌ ಖಾನ್‌, ಡಿಎಸ್‌ ರತಿ, ರವಿ ಬಿಷ್ಣೊಯಿ, ಫ್ರಿನ್ಸ್‌ ಯಾದವ್‌ ತಲಾ ಒಂದು ವಿಕೆಟ್‌ ಪಡೆದರು.

ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಲಖನೌ ತಂಡದ ಆರಂಭಿಕ ಬ್ಯಾಟರ್‌ ಏಡನ್‌ ಮರ್ಕರಮ್‌ 1(4) ವಿಕೆಟ್‌ ನಂತರ ಮಿಚೆಲ್‌ ಮಾರ್ಸ್‌ 52(31) ಜೊತೆಗೋಡಿದ ನಿಕೋಲಸ್‌ ಪೂರನ್‌ 70(26) ಬಿರುಸಿನ ಆರಂಭ ಒದಗಿಸುವ ಮೂಲಕ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ಹತ್ತಿರ ಕೊಂಡೊಯ್ದರು.

ಇವರಿಬ್ಬರ ವಿಕೆಟ್‌ ನಂತರ ಕೊನೆಯಲ್ಲಿ ಡೆವಿಡ್‌ ಮಿಲ್ಲರ್‌ 13(7) ಹಾಗೂ ಅಬ್ದುಲ್‌ ಸಮದ್‌ 22(8) ಆಟದ ಜೊತೆಯೊಂದಿಗೆ ಲಖನೌ ತಂಡ 16.1 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಗೆಲುವಿನ ದಡ ಸೇರಿತು.

ಆಂದೋಲನ ಡೆಸ್ಕ್

Recent Posts

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

2 mins ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

1 hour ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

1 hour ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

2 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

3 hours ago

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

4 hours ago