ಹೈದರಾಬಾದ್: ಮಿಚೆಲ್ ಮಾರ್ಷ್ ಹಾಗೂ ನಿಕೋಲಸ್ ಪೂರನ್ ಅವರ ಅಬ್ಬರದ ಆಟದಿಂದ ಹೈದರಾಬಾದ್ ವಿರುದ್ಧ ಲಖನೌ ತಂಡವು 5 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ.
ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಖನೌ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಅದರಂತೆ ಬ್ಯಾಟಿಂಗ್ ಆರಂಭಿಸಿದ ಬಿಗ್ ಹಿಟ್ಟರ್ಗಳ ಹೈದರಾಬಾದ್ ತಂಡವು ಲಖನೌ ಬೌಲರ್ಗಳ ಬಿಗಿ ಬೌಲಿಂಗ್ ದಾಳಿಯ ನಡುವೆಯೂ 9 ವಿಕೆಟ್ ಕಳೆದುಕೊಂಡು 190 ರನ್ಗಳಿಸಿತು. ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ 47(28), ನಿತೀಸ್ ಕುಮಾರ್ ರೆಡ್ಡಿ 32(28), ಹೆನ್ರಿಕ್ ಕ್ಲಾಸೆನ್ 26(17), ಅಂಕಿತ್ ವರ್ಮಾ 36(13), ಪ್ಯಾಟ್ ಕಮಿನ್ಸ್ 18(4) ರನ್ ಗಳಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಗಳಿಸಲು ನೆರವಾದರು.
ಲಖನೌ ತಂಡದ ಪರ ಅದ್ಭುತ ಬೌಲಿಂಗ್ ದಾಳಿ ನಡೆಸಿದ ಶಾರ್ದೂಲ್ ಠಾಕೂರ್ 34ರನ್ ನೀಡಿ 4 ವಿಕೆಟ್ ಪಡೆದರೆ ಅವೀಶ್ ಖಾನ್, ಡಿಎಸ್ ರತಿ, ರವಿ ಬಿಷ್ಣೊಯಿ, ಫ್ರಿನ್ಸ್ ಯಾದವ್ ತಲಾ ಒಂದು ವಿಕೆಟ್ ಪಡೆದರು.
ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಲಖನೌ ತಂಡದ ಆರಂಭಿಕ ಬ್ಯಾಟರ್ ಏಡನ್ ಮರ್ಕರಮ್ 1(4) ವಿಕೆಟ್ ನಂತರ ಮಿಚೆಲ್ ಮಾರ್ಸ್ 52(31) ಜೊತೆಗೋಡಿದ ನಿಕೋಲಸ್ ಪೂರನ್ 70(26) ಬಿರುಸಿನ ಆರಂಭ ಒದಗಿಸುವ ಮೂಲಕ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ಹತ್ತಿರ ಕೊಂಡೊಯ್ದರು.
ಇವರಿಬ್ಬರ ವಿಕೆಟ್ ನಂತರ ಕೊನೆಯಲ್ಲಿ ಡೆವಿಡ್ ಮಿಲ್ಲರ್ 13(7) ಹಾಗೂ ಅಬ್ದುಲ್ ಸಮದ್ 22(8) ಆಟದ ಜೊತೆಯೊಂದಿಗೆ ಲಖನೌ ತಂಡ 16.1 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…