ಕರಾಚಿ: ಭಾರತದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ನಲ್ಲಿ ಅಹಮದಾಬಾದ್ ನಲ್ಲಿ ಪಂದ್ಯವಾಡಲು ಪಾಖಿಸ್ತಾನ ಹಿಂದೇಟು ಹಾಕುತ್ತಿದೆ. ನಾಕೌಟ್ ಪಂದ್ಯ ಹೊರತು ಪಡಿಸಿ ಬೇರೆ ಪಂದ್ಯಗಳನ್ನು ಅಹಮದಾಬಾದ್ ನಲ್ಲಿ ಆಡುವುದಿಲ್ಲ ಎಂದಿದೆ. ಈ ವಿಚಾರಕ್ಕೆ ಇದೀಗ ಪಾಕ್ ಮಾಜಿ ನಾಯಕ ಶಾಹೀದ್ ಅಫ್ರಿದಿ ಪಾಕಿಸ್ತಾನ ಮಂಡಳಿಯನ್ನು ಪ್ರಶ್ನಿಸಿದ್ದಾರೆ.
ಅಹಮದಾಬಾದ್ನಲ್ಲಿ ಆಡಲು ನಿರಾಕರಿಸಿದ ಹಿಂದಿನ ತರ್ಕದ ಬಗ್ಗೆ ಪಿಸಿಬಿಯನ್ನು ಅಫ್ರಿದಿ ಪ್ರಶ್ನಿಸಿದರು.
“ಅಹಮದಾಬಾದ್ ಪಿಚ್ಗಳಲ್ಲಿ ಆಡಲು ಅವರು ಏಕೆ ನಿರಾಕರಿಸುತ್ತಿದ್ದಾರೆ? ಅದೇನು ಬೆಂಕಿಯನ್ನು ಎಸೆಯುತ್ತದೆಯೇ ಅಥವಾ ಅಲ್ಲೇನು ದೆವ್ವವಿದೆಯೇ? ಹೋಗಿ ಆಟವಾಡಿ, ಗೆಲುವು ಸಾಧಿಸಿ” ಎಂದು ಅಫ್ರಿದಿ ಸಾಮಾ ಟಿವಿಯಲ್ಲಿ ಹೇಳಿದರು.
“ನಮಗೆ ಮುಖ್ಯವಾದುದು ಪಾಕಿಸ್ತಾನ ತಂಡದ ಗೆಲುವು. ಮುಖ್ಯ ವಿಷಯ ಅದೆ. ಇದನ್ನು ಧನಾತ್ಮಕವಾಗಿ ತೆಗೆದುಕೊಳ್ಳಿ. ತುಂಬಿರುವ ಭಾರತೀಯ ಪ್ರೇಕ್ಷಕರ ಮುಂದೆ ವಿಜಯ ಸಾಧಿಸಿ” ಎಂದು ಅವರು ಹೇಳಿದರು.
ಅಕ್ಟೋಬರ್ ನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ.
ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…
2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…
ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…
ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…