ಕರಾಚಿ: ಭಾರತದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ನಲ್ಲಿ ಅಹಮದಾಬಾದ್ ನಲ್ಲಿ ಪಂದ್ಯವಾಡಲು ಪಾಖಿಸ್ತಾನ ಹಿಂದೇಟು ಹಾಕುತ್ತಿದೆ. ನಾಕೌಟ್ ಪಂದ್ಯ ಹೊರತು ಪಡಿಸಿ ಬೇರೆ ಪಂದ್ಯಗಳನ್ನು ಅಹಮದಾಬಾದ್ ನಲ್ಲಿ ಆಡುವುದಿಲ್ಲ ಎಂದಿದೆ. ಈ ವಿಚಾರಕ್ಕೆ ಇದೀಗ ಪಾಕ್ ಮಾಜಿ ನಾಯಕ ಶಾಹೀದ್ ಅಫ್ರಿದಿ ಪಾಕಿಸ್ತಾನ ಮಂಡಳಿಯನ್ನು ಪ್ರಶ್ನಿಸಿದ್ದಾರೆ.
ಅಹಮದಾಬಾದ್ನಲ್ಲಿ ಆಡಲು ನಿರಾಕರಿಸಿದ ಹಿಂದಿನ ತರ್ಕದ ಬಗ್ಗೆ ಪಿಸಿಬಿಯನ್ನು ಅಫ್ರಿದಿ ಪ್ರಶ್ನಿಸಿದರು.
“ಅಹಮದಾಬಾದ್ ಪಿಚ್ಗಳಲ್ಲಿ ಆಡಲು ಅವರು ಏಕೆ ನಿರಾಕರಿಸುತ್ತಿದ್ದಾರೆ? ಅದೇನು ಬೆಂಕಿಯನ್ನು ಎಸೆಯುತ್ತದೆಯೇ ಅಥವಾ ಅಲ್ಲೇನು ದೆವ್ವವಿದೆಯೇ? ಹೋಗಿ ಆಟವಾಡಿ, ಗೆಲುವು ಸಾಧಿಸಿ” ಎಂದು ಅಫ್ರಿದಿ ಸಾಮಾ ಟಿವಿಯಲ್ಲಿ ಹೇಳಿದರು.
“ನಮಗೆ ಮುಖ್ಯವಾದುದು ಪಾಕಿಸ್ತಾನ ತಂಡದ ಗೆಲುವು. ಮುಖ್ಯ ವಿಷಯ ಅದೆ. ಇದನ್ನು ಧನಾತ್ಮಕವಾಗಿ ತೆಗೆದುಕೊಳ್ಳಿ. ತುಂಬಿರುವ ಭಾರತೀಯ ಪ್ರೇಕ್ಷಕರ ಮುಂದೆ ವಿಜಯ ಸಾಧಿಸಿ” ಎಂದು ಅವರು ಹೇಳಿದರು.
ಅಕ್ಟೋಬರ್ ನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…