ಕರಾಚಿ: ಭಾರತದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ನಲ್ಲಿ ಅಹಮದಾಬಾದ್ ನಲ್ಲಿ ಪಂದ್ಯವಾಡಲು ಪಾಖಿಸ್ತಾನ ಹಿಂದೇಟು ಹಾಕುತ್ತಿದೆ. ನಾಕೌಟ್ ಪಂದ್ಯ ಹೊರತು ಪಡಿಸಿ ಬೇರೆ ಪಂದ್ಯಗಳನ್ನು ಅಹಮದಾಬಾದ್ ನಲ್ಲಿ ಆಡುವುದಿಲ್ಲ ಎಂದಿದೆ. ಈ ವಿಚಾರಕ್ಕೆ ಇದೀಗ ಪಾಕ್ ಮಾಜಿ ನಾಯಕ ಶಾಹೀದ್ ಅಫ್ರಿದಿ ಪಾಕಿಸ್ತಾನ ಮಂಡಳಿಯನ್ನು ಪ್ರಶ್ನಿಸಿದ್ದಾರೆ.
ಅಹಮದಾಬಾದ್ನಲ್ಲಿ ಆಡಲು ನಿರಾಕರಿಸಿದ ಹಿಂದಿನ ತರ್ಕದ ಬಗ್ಗೆ ಪಿಸಿಬಿಯನ್ನು ಅಫ್ರಿದಿ ಪ್ರಶ್ನಿಸಿದರು.
“ಅಹಮದಾಬಾದ್ ಪಿಚ್ಗಳಲ್ಲಿ ಆಡಲು ಅವರು ಏಕೆ ನಿರಾಕರಿಸುತ್ತಿದ್ದಾರೆ? ಅದೇನು ಬೆಂಕಿಯನ್ನು ಎಸೆಯುತ್ತದೆಯೇ ಅಥವಾ ಅಲ್ಲೇನು ದೆವ್ವವಿದೆಯೇ? ಹೋಗಿ ಆಟವಾಡಿ, ಗೆಲುವು ಸಾಧಿಸಿ” ಎಂದು ಅಫ್ರಿದಿ ಸಾಮಾ ಟಿವಿಯಲ್ಲಿ ಹೇಳಿದರು.
“ನಮಗೆ ಮುಖ್ಯವಾದುದು ಪಾಕಿಸ್ತಾನ ತಂಡದ ಗೆಲುವು. ಮುಖ್ಯ ವಿಷಯ ಅದೆ. ಇದನ್ನು ಧನಾತ್ಮಕವಾಗಿ ತೆಗೆದುಕೊಳ್ಳಿ. ತುಂಬಿರುವ ಭಾರತೀಯ ಪ್ರೇಕ್ಷಕರ ಮುಂದೆ ವಿಜಯ ಸಾಧಿಸಿ” ಎಂದು ಅವರು ಹೇಳಿದರು.
ಅಕ್ಟೋಬರ್ ನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…