ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುವ ಪ್ರಮುಖ ಆಟಗಾರರ ಪೈಕಿ ಎಂಎಸ್ ಧೋನಿ ಮುಂಚೂಣಿಯಲ್ಲಿದ್ದಾರೆ. ಈ ಆವೃತ್ತಿಯು ಎಂಎಸ್ ಧೋನಿ ಪಾಲಿಗೆ ಕೊನೆಯ ಟೂರ್ನಿ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಂಎಸ್ ಧೋನಿ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನನ್ನು ಕಣ್ತುಂಬಿಸಿಕೊಳ್ಳಲು ಸ್ಟೇಡಿಯಂಗೆ ಅಧಿಕ ಸಂಖ್ಯೆಯಲ್ಲಿ ಬರುತ್ತಿದ್ದಾರೆ.
ಅದರಲ್ಲೂ ವಿಶೇಷವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ತವರು ಅಂಗಣ ಎಂಎ ಚಿದಂಬರಂ ಕ್ರೀಡಾಂಗಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಿದ್ದಾರೆ. ಪಂದ್ಯದ ವೇಳೆ ಧೋನಿ….ಧೋನಿ…ಧೋನಿ.. ಎಂದು ಅಭಿಮಾನಿಗಳು ಜೋರಾಗಿ ಕೂಗುತ್ತಾರೆ. ಒಂದು ವೇಳೆ ಎಂಎಸ್ ಧೋನಿ ಕ್ರೀಸ್ನಲ್ಲಿ ಇಲ್ಲವಾದರೂ ಎಂಎಸ್ ಧೋನಿ ಹೆಸರನ್ನು ಫ್ಯಾನ್ಸ್ ಜಪಿಸುತ್ತಿದ್ದಾರೆ. ಇದನ್ನು ನಾವು ಸಾಕಷ್ಟು ಬಾರಿ ನೋಡಿದ್ದೇವೆ.
ಅಂದಹಾಗೆ ಇಲ್ಲಿಯವರೆಗೂ ಆಡಿರುವ 12 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ಪಂದ್ಯಗಳಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ 4ರಲ್ಲಿ ಸೋಲು ಅನುಭವಿಸಿತ್ತು. ಆ ಮೂಲಕ 15 ಅಂಕಗಳನ್ನು ಕಲೆ ಹಾಕುವ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಎರಡನೇ ಸ್ಥಾನದಲ್ಲಿದೆ. ಇದರೊಂದಿಗೆ ಪ್ಲೇಆಫ್ಸ್ಗೆ ಬಹುತೇಕ ಅರ್ಹತೆ ಪಡೆದಿದೆ.
ಬುಧವಾರ ತವರು ಅಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ 27 ರನ್ಗಳಿಂದ ಗೆಲುವು ಪಡೆಯಿತು. ಈ ಪಂದ್ಯದಲ್ಲಿ 21 ರನ್ ಹಾಗೂ ಒಂದು ವಿಕೆಟ್ ಕಿತ್ತಿದ್ದ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ವೇಳೆ ಮಾತನಾಡಿದ ರವೀಂದ್ರ ಜಡೇಜಾ ತಮ್ಮ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಮಾತನಾಡಿದರು.
ಅಂದಹಾಗೆ ಸಿಎಸ್ಕೆ ಪರ ಎಂಎಸ್ ಧೋನಿಗೂ ಮುನ್ನ 7ನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಬ್ಯಾಟ್ ಮಾಡಿದ್ದರು. 21 ರನ್ ಗಳಿಸಿ ಜಡೇಜಾ ಔಟ್ ಆದ ಬಳಿಕ ಎಂಎಸ್ ಧೋನಿ ಕೇವಲ 9 ಎಸೆತಗಳಲ್ಲಿ ಅಜೇಯ 20 ರನ್ ಸಿಡಿಸಿದ್ದರು. ಈ ವೇಳೆ ಧೋನಿ…ಧೋನಿ ಎಂದು ಕರೆಯುತ್ತಿದ್ದರು. ಅಂದಹಾಗೆ ಎಂಎಸ್ ಧೋನಿ ಕ್ರೀಸ್ಗೆ ಬರುವುದಕ್ಕೂ ಮುನ್ನ ಕೂಡ ಧೋನಿ ಹೆಸರನ್ನು ಅಭಿಮಾನಿಗಳು ಜಪಿಸುತ್ತಿದ್ದರು.
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ ರವಿಂದ್ರ ಜಡೇಜಾ, “ನಾನು ಬ್ಯಾಟ್ ಮಾಡುತ್ತಿದ್ದ ವೇಳೆ ಮಾಹಿ ಭಾಯ್ ಹೆಸರನ್ನು ಜೋರಾಗಿ ಕೂಗುತ್ತಿದ್ದರು. ಒಂದು ವೇಳೆ ನಾನು ಎಂಎಸ್ ಧೋನಿಗೂ ಮುನ್ನ ಮೇಲಿನ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರೆ, ನಾನು ಔಟ್ ಆಗಬೇಕೆಂದು ಅಭಿಮಾನಿಗಳು ಹಿಡಿ ಶಾಪ ಹಾಕುತ್ತಾರೆ. ಏನೇ ಆಗಲಿ ಪಂದ್ಯ ಗೆಲ್ಲುವುದರಿಂದ ನನಗೆ ತುಂಬಾ ಖುಷಿಯಾಗುತ್ತದೆ,” ಎಂದು ಹೇಳುವ ಮೂಲಕ ನಕ್ಕರು.
ಮೇ.14 ರಂದು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಮುಂದಿನ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಗೆದ್ದರೆ ಸಿಎಸ್ಕೆ ಪ್ಲೇಆಫ್ಸ್ಗೆ ಅಧಿಕೃತವಾಗಿ ಅರ್ಹತೆ ಪಡೆಯಲಿದೆ.
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…