ಹೊಸದಿಲ್ಲಿ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ಅಧ್ಯಕ್ಷರಾಗಿ ಜಯ್ ಶಾ ಅವರು ಭಾನುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ಐಸಿಸಿ ಗದ್ದುಗೆಗೆ ಏರಿದ ಅತ್ಯಂತ ಕಿರಿಯ ಹಾಗೂ 5ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಜಯ್ ಶಾ ಪಾತ್ರರಾಗಿದ್ದಾರೆ.
ಜಯ್ ಶಾ ಇದೇ ವರ್ಷದ ಆಗಸ್ಟ್ನಲ್ಲಿ ಐಸಿಸಿ ಅಧ್ಯ ಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಹಿಂದಿನ ಅಧ್ಯಕ್ಷರ ಅವಧಿ ಮುಗಿಯುವವರೆಗೆ ತಾತ್ಕಾಲಿಕವಾಗಿದ್ದ ಅವರ ಅಧಿಕಾರ ಈಗ ಅಧಿಕೃತವಾಗಿದೆ ಎಂದು ಐಸಿಸಿ ಪ್ರಕಟಿಸಿದೆ.
ಬಿಸಿಸಿಐ ಕಾರ್ಯದರ್ಶಿಯಾಗಿ ಭಾರತೀಯ ಕ್ರಿಕೆಟ್ ಅನ್ನು ಉತ್ತುಂಗಕ್ಕೇರಿಸಿದ ಜಯ್ ಶಾ, ಇದೀಗ ಐಸಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದು, ಚಾಂಪಿಯನ್ಸ್ ಟ್ರೋಫಿ ಸಂಬಂಧ ಇರುವ ವಿವಾದ ಇವರ ಹಾಜರಾತಿಯಲ್ಲಿ ನಡೆಯಲಿದೆ.
2019ರಲ್ಲಿ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೇರಿದ ಜಯ್ ಶಾ, 6 ವರ್ಷಗಳ ಕಾಲ ಭಾರತೀಯ ಕ್ರಿಕೆಟ್ಗೆ ಸೇವೆ ಸಲ್ಲಿಸಿದ್ದಾರೆ. ಭಾರತದಲ್ಲಿ ಐಪಿಎಲ್ ಜನಪ್ರಿಯಗೊಂಡು ವಿಶ್ವದಾದ್ಯಂತ ಮನ್ನಣೆ ಗಿಟ್ಟಿಸಿಕೊಳ್ಳವಲ್ಲಿ ಜಯ್ ಶಾ ಅವರ ಪಾತ್ರ ದೊಡ್ಡದಿದೆ. 2021 ಜನವರಿಯಿಂದ ಏಷ್ಯನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ಆಗಿದ್ದರು.
ಈಗ ಜಯ್ ಶಾ ಅವರ ಅಧಿಕಾರಾವಧಿಯಲ್ಲಿ ಮೊದಲ ಐಸಿಸಿ ಚಾಂಪಿಯನ್ಸ್ ಟ್ರೋಫಿಯಾಗಿದ್ದು, ಈ ಟೂರ್ನಿಯ ಪ್ರಾಯೋಜಕತ್ವಕ್ಕೆ ಸಂಬಂಧಿಸಿದಂತೆ ಸದ್ಯ ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಸಮಸ್ಯೆಯನ್ನು ಇವರ ಅಧ್ಯಕ್ಷತೆಯಲ್ಲಿ ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…