ಕ್ರೀಡೆ

ಯುಪಿ ಯೋಧರಿಗೆ ತಲೆಬಾಗಿದ ಜೈಪುರ ಪಿಂಕ್‌ ಪ್ಯಾಂಥರ್ಸ್‌

ಬೆಂಗಳೂರು: ಪ್ರಥಮಾರ್ಧಲ್ಲಿ ವೈಫಲ್ಯಗೊಂಡು ಅಂಕಗಳಿಸದೆ ಅಚ್ಚರಿ ಮೂಡಿಸಿದ್ದ ಪ್ರದೀಪ್‌ ನರ್ವಾಲ್‌ ದ್ವಿತಿಯಾರ್ಧಲ್ಲಿ ಅನುಭವದ ಆಟವಾಡಿ ಅಮೂಲ್ಯ 7 ಅಂಕಗಳನ್ನು ಗಳಿಸುವ ವಿವೋ ಪ್ರೋ ಕಬಡ್ಡಿ ಲೀಗ್‌ನ 9ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಯುಪಿ ಯೋಧಾಸ್‌ ತಂಡ ಜೈಪುರ ಪಿಂಕ್‌ ಪ್ಯಾಂಥರ್ಸ್‌ ವಿರುದ್ಧ 34-32 ಅಂಕಗಳ ಅಂತರದಲ್ಲಿ ಜಯ ಗಳಿಸಿತು.

ವಿಜೇತ ಯುಪಿ ಯೋಧಾಸ್‌ ಪರ ಪ್ರದೀಪ್‌ ನರ್ವಾಲ್‌ ಹಾಗೂ ಸುರೀಂಧರ್‌ ಗಿಲ್‌ (9 ಅಂಕಗಳು) ಜಯದ ರೂವಾರಿ ಎನಿಸಿದರು. ಆಶು ಸಿಂಗ್‌ ಹಾಗೂ ಶುಭಂ ಕುಮಾರ್‌ ಸೇರಿ ಟ್ಯಾಕಲ್‌ನಲ್ಲಿ 7 ಅಂಕಗಳನ್ನು ಗಳಿಸಿದರು. ಸೋತ ಪಿಂಕ್‌ ಪ್ಯಾಂಥರ್ಸ್‌ ಪರ ಅರ್ಜುನ್‌ ದೆಶ್ವಾಲ್‌ ಒಟ್ಟು 8 ರೈಡಿಂಗ್‌ ಅಂಕಗಳನ್ನು ಗಳಿಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲಾಗಲಿಲ್ಲ. ಅನುಭವಿ ಆಟಗಾರ ರಾಹುಲ್‌ ಚೌಧರಿ ಸಂಪೂರ್ಣ ವಿಫಲರಾಗಿರುವುದು ತಂಡದ ಸೋಲಿಗೆ ಮತ್ತೊಂದು ಕಾರಣವಾಗಿತ್ತು,

ದ್ವಿತಿಯಾರ್ಧದಲ್ಲಿ ಪಂದ್ಯದ ಗತಿಯೇ ಬದಲಾಯಿತು. ಹಿನ್ನಡೆ ಕಂಡಿದ್ದ ಯುಪಿ ಯೋಧಾಸ್‌ ಮುನ್ನಡೆಯ ಹೆಜ್ಜೆಯಿಟ್ಟಿತು. ಸೂಪರ್‌ ಟ್ಯಾಕಲ್‌ ಮೂಲಕ ಬೃಹತ್‌ ಅಂತದ ಕಾಯ್ದುಕೊಂಡಿತು, ಆರನೇ ರೈಡಿಂಗ್‌ನಲ್ಲಿ ಪ್ರದೀಪ್‌ ನರ್ವಾಲ್‌ ಅಂಕದ ಖಾತೆ ತೆರೆಯುವಲ್ಲಿ ಸಫಲರಾದರು. ರಾಹುಲ್‌ ಚೌಧರಿಯನ್ನು ಟ್ಯಾಕಲ್‌ ಮಾಡಿ ಪಿಂಕ್‌ ಪ್ಯಾಂಥರ್ಸ್‌ನ ಬಲ ಕುಂದಿಸುವಲ್ಲಿ ಯೋಧಾಸ್‌ ಸಫಲವಾಯಿತು. ಕೂಡಲೇ ರಾಹುಲ್‌ ಚೌಧರಿ ಬದಲಿಗೆ ಭವಾನಿ ರಜಪೂತ್‌ ಅವರನ್ನು ಅಂಗಣಕ್ಕಿಳಿಸಲಾಯಿತು. ಮೊದಲ ರೈಡಿಂಗ್‌ನಲ್ಲಿಯೇ ಮೂರು ಅಂಕಗಳೊಂದಿಗೆ ಯಶಸ್ಸು ಕಂಡ ಭವಾನಿ ತಂಡದ ಚೇತರಿಕೆಗೆ ನೆರವಾದರು. ಯುವ ಆಟಗಾರ ಅಜಿತ್‌ ಜೈಪುರ ಪಿಂಕ್‌ ಪ್ಯಾಂಥರ್ಸ್‌ನ ಮುನ್ನಡೆಗೆ ನೆರವಾದ ಮತ್ತೊಬ್ಬ ಯುವ ಆಟಗಾರ. ಆದರೆ ಯುಪಿ ಯೋಧಾಸ್‌ ತಂಡದ ಮುನ್ನಡೆಗೆ ಅಡ್ಡಿಯಾಗಲಿಲ್ಲ.

ಅತ್ಯಂತ ನಿರ್ಣಾಯಕ ಹಂತದಲ್ಲಿ ಯುಪಿ ಯೋಧಾಸ್‌ ಆಲೌಟ್‌ ಆದದ್ದು ಪಂದ್ಯ ಸಮಬಲದತ್ತ ಸಾಗುವಂತೆ ಮಾಡಿತು. ಆದರೆ ಸರೀಂಧರ್‌ ಗಿಲ್‌ ರೈಡಿಂಗ್‌ ಮೂಲಕ ಎರಡು ಅಂಕಗಳನ್ನು ಗಳಿಸಿಯೋಧಾಸ್‌ ತಂಡಕ್ಕೆ ಮುನ್ನಡೆ ಕಲ್ಪಿಸಿದರು.
ಪ್ರಥಮಾರ್ಧದಲ್ಲಿ ಪ್ಯಾಂಥರ್ಸ್‌ ಪ್ರಭುತ್ವ: ಯುವ ಆಟಗಾರರ ಜವಾಬ್ದಾರಿ, ಹಿರಿಯ ಆಟಗಾರರ ಸಲಹೆ ಇವುಗಳಿಂದ ಅದ್ಭುತ ಪ್ರದರ್ಶನ ತೋರಿದ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡ ಪ್ರಥಮಾರ್ಧದಲ್ಲಿ ಯುಪಿ ಯೋಧಾಸ್‌ ವಿರುದ್ಧ 15-12 ಅಂತರದಲ್ಲಿ ಮೇಲುಗೈ ಸಾಧಿಸಿತು.
ಇದುವರೆಗೂ ಪ್ರತಿಯೊಂದು ಋತುವಿನಲ್ಲೂ ಅದ್ಭುತ ಪ್ರದರ್ಶನ ತೋರಿ 1300ಕ್ಕೂ ರೈಡಿಂಗ್‌ ಅಂಗಳನ್ನು ಗಳಿಸಿ ಖ್ಯಾತಿ ಪಡೆದಿದ್ದ ಪ್ರದೀಪ್‌ ನರ್ವಾಲ್‌ ಈ ಬಾರಿ ಯು ಪಿ ಯೋಧಾಸ್‌ ತಂಡದಲ್ಲಿದ್ದು, ಪ್ರಥಮಾರ್ಧದಲ್ಲಿ ತಮ್ಮ ನೈಜ ಪ್ರದರ್ಶನ ತೋರುವಲ್ಲಿ ವಿಫಲರಾದದ್ದು ಕಬಡ್ಡಿ ಪ್ರೇಕ್ಷರಿಗೆ ನಿರಾಸೆಯನ್ನುಂಟು ಮಾಡಿರುವುದು ಸಹಜ. ನಾಲ್ಕು ಪ್ರದೀಪ್‌ ನರ್ವಾಲ್‌ ರೈಡ್‌ ಮಾಡಿದರೂ ಅಂಕ ಎದುರಾಳಿ ತಂಡದ ಪಾಲಾಗಿತ್ತು.
ತಂಡದ ಮಾಲೀಕ ನಟ ಅಭಿಷೇಕ್‌ ಬಚ್ಚನ್‌ ಅವರ ಸಮ್ಮುಖದಲ್ಲಿ ಅತ್ಯಂತ ಆತ್ಮವಿಶ್ವಾಸದಿಂದ ಆಡಿದ ಜೈಪುರ ಪಿಂಕ್‌ ಪ್ಯಾಂಥರ್ಸ್‌ ಮೊದಲ ರೈಡ್‌ ಮಾಡಿದ ಪ್ರದೀಪ್‌ ನರ್ವಾಲ್‌ ಅವರನ್ನು ಟ್ಯಾಕಲ್‌ ಮಾಡುವಲ್ಲಿ ಯಶಸ್ವಿಯಾಯಿತು. ಜೈಪುರ ಪಿಂಕ್‌ ಪ್ಯಾಂಥರ್ಸ್‌ನಲ್ಲಿದ್ದ ಹಿರಿಯ ಅನುಭವಿ ಆಟಗಾರ ರಾಹುಲ್‌ ಚೌಧರಿ ಕೂಡ ಗಳಿಸಿದ್ದು ಕೇವಲ 1 ಅಂಕ. ಆದರೆ ಯುವ ನಾಯಕ ಸುನಿಲ್‌ ಕುಮಾರ್‌ ಅವರ ಮುಂದಾಳತ್ವದಲ್ಲಿ ಅಂಗಳಕ್ಕಿಳಿದ ತಂಡ ಉತ್ತಮ ಪ್ರದರ್ಶನ ನೀಡಿತು. ಯುವ ಆಟಗಾರ ಅಂಕುಶ್‌ ಟ್ಯಾಕಲ್‌ನಲ್ಲಿ 3 ಅಂಕಗಳನ್ನು ಗಳಿಸಿ ಕಬಡ್ಡಿಯಲ್ಲಿ ಶಕ್ತಿಯ ಜೊತೆಯಲ್ಲಿ ಕೌಶಲ್ಯವೂ ಪ್ರಮುಖ ಎಂಬುದನ್ನು ಸಾಬೀತುಪಡಿಸಿದರು. ರೈಡರ್‌ ಅರ್ಜುನ್‌ ದೆಶ್ವಾಲ್‌ 4 ಅಂಕಗಳನ್ನು ಗಳಿಸಿ ತಂಡದ ಮುನ್ನಡೆಯಲ್ಲಿ ಪ್ರಮುಖ ಪಾತ್ರವಹಿಸಿದರು. ಅಭಿಷೇಕ್‌ ಅವರು ಟ್ಯಾಕಲ್‌ನಲ್ಲಿ ಗಳಿಸಿದ 2 ಅಂಕ ಯುಪಿ ಯೋಧಾಸ್‌ ಪಡೆಯನ್ನು ನಿಯಂತ್ರಿಸಲು ಸಾಧ್ಯವಾಯಿತು. ಯುಪಿ ಯೋಧಾಸ್‌ ಪಡೆಯನ್ನು ಆಲೌಟ್‌ ಮಾಡಿದ ಪಿಂಕ್‌ ಪ್ಯಾಂಥರ್ಸ್‌ ಬೋನಸ್‌ ಅಂಕದೊಂದಿಗೆ ಮುನ್ನಡೆ ಕಂಡುಕೊಂಡಿತು.

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago