ಕ್ರೀಡೆ

ಜೈಸ್ವಾಲ್‌, ಅಶ್ವಿನ್‌ ಕಮಾಲ್‌: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಡೊಮೆನಿಕಾ: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಮೊದಲ ಇನ್ನಿಂಗ್ಸ್ ನಲ್ಲಿ 271 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ ತಂಡ 2ನೇ ಇನ್ನಿಂಗ್ಸ್ ನಲ್ಲೂ ಆರ್ ಅಶ್ವಿನ್ ಸ್ಪಿನ್ ದಾಳಿಗೆ ತತ್ತರಿಸಿ ಕೇವಲ 130 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ  ಇನ್ನಿಂಗ್ಸ್ ಮತ್ತು 141 ರನ್ ಗಳ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಎರಡು ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಭಾರತ ತಂಡ 1–0 ಅಂತರದ ಮುನ್ನಡೆ ಸಾಧಿಸಿದೆ.

ಪದಾರ್ಪಣೆ ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ (171), ನಾಯಕ ರೋಹಿತ್ ಶರ್ಮಾ (103) ಶತಕ ಹಾಗೂ ಅನುಭವಿ ವಿರಾಟ್‌ ಕೊಹ್ಲಿ 76 ರನ್‌ ಕಲೆಹಾಕಿ ಟೀಂ ಇಂಡಿಯಾ ಇನಿಂಗ್ಸ್‌ಗೆ ಬಲ ತುಂಬಿದ್ದರು.

ಆರ್‌.ಅಶ್ವಿನ್‌ ಕೈಚಳಕ
ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ ಗಳಿಗೆ ಸರ್ವಪತನ ಕಂಡಿದ್ದ ವೆಸ್ಟ್‌ ಇಂಡೀಸ್‌ ತಂಡ, ಭಾರತದ ನೀಡಿದ 421 ರನ್‌ ಗಳ ಗುರಿಯನ್ನು ಬೆನ್ನಟ್ಟಲು ಮುಂದಾಯಿತು.  270 ರನ್ ಹಿನ್ನಡೆಯೊಂದಿಗೆ ಕಣಕ್ಕಿಳಿದ ವಿಂಡೀಸ್ ತಂಡದ ಬ್ಯಾಟಿಂಗ್‌, ಆರ್‌.ಅಶ್ವಿನ್‌ ಕೈಚಳಕದ ಎದುರು ಎರಡನೇ ಇನಿಂಗ್ಸ್‌ನಲ್ಲೂ ಸುಧಾರಿಸಲಿಲ್ಲ.

ಸ್ಪಿನ್‌ ಬಲೆಗೆ ಬಿದ್ದ ಆತಿಥೇಯ ತಂಡದ ಬ್ಯಾಟರ್‌ಗಳು ರನ್‌ ಗಳಿಸಲು ಪರದಾಡಿದರು. ಅಲಿಕ್ ಅತಾಂಜೆ 27 ರನ್‌ ಗಳಿಸಿದ್ದೇ, ಈ ತಂಡದ ಪರ ವೈಯಕ್ತಿಕ ಗರಿಷ್ಠ ಮೊತ್ತ ಎನಿಸಿತು. ಹೀಗಾಗಿ, ವಿಂಡೀಸ್‌ ಬಳಗ 130 ರನ್ ಗಳಿಗೆ ಸರ್ವ ಪತನ ಕಂಡು, ಹೀನಾಯ ಸೋಲೊಪ್ಪಿಕೊಳ್ಳಬೇಕಾಯಿತು.

ಭಾರತ ಪರ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದಿದ್ದ ಅಶ್ವಿನ್, ಎರಡನೇ ಇನಿಂಗ್ಸ್‌ನಲ್ಲಿ 7 ವಿಕೆಟ್‌ ಕಬಳಿಸಿದರು. ಯಶಸ್ವಿ ಜೈಸ್ವಾಲ್ ಪಂದ್ಯಶ್ರೇಷ್ಠ ಪ್ರಸಸ್ತಿಗೆ ಭಾಜನರಾದರು.

ಎರಡನೇ ಪಂದ್ಯ ಟ್ರಿನಿಡಾಡ್‌ನ ಕ್ವೀನ್ಸ್‌ ಪಾರ್ಕ್‌ನಲ್ಲಿ ಜುಲೈ 20ರಿಂದ ಜುಲೈ 24ರ ವರೆಗೆ ನಡೆಯಲಿದೆ.

andolanait

Recent Posts

75 ವರ್ಷದ ಸಂಪ್ರದಾಯ ಮುರಿಯಲಿರುವ ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೇಂದ್ರ ಬಜೆಟ್‌ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು 9ನೇ ಬಜೆಟ್‌ ಮಂಡನೆ…

24 mins ago

ರೀಲ್ ಹುಚ್ಚಿಗೆ ಬಲಿಯಾದ ಒಂದು ಅಮಾಯಕ ಜೀವ

ಸೂರ್ಯ ಪುತ್ರ ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ…

4 hours ago

ಕಣಗಾಲ್ ಪುಟ್ಟಣ್ಣನವರ ಕರುಣಾಜನಕ ಮನೆ

ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ...…

4 hours ago

ಮುದ್ದಿನ ಬೆಕ್ಕುಗಳಿಗೆ ಬೆಚ್ಚಗಿನ ಸಂಗ್ರಹಾಲಯ

ಅಕ್ಷತಾ ನೀವು ಬೆಕ್ಕುಪ್ರಿಯರಾಗಿದ್ದರೆ ಮೈಸೂರು-ನಂಜನಗೂಡು ರಸ್ತೆಯ ಈ ಮಾರ್ಜಾಲ ಸಂಗ್ರಹಾಲಯಕ್ಕೆ ಭೇಟಿಕೊಡಿ. ಮುದ್ದಿನ ಸಾಕುಪ್ರಾಣಿಯಾಗಿ ಮನೆಯೊಳಗಿರುವ ಬೆಕ್ಕನ್ನು ಕೌತುಕದ ಕಣ್ಣಿನಿಂದ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಉತ್ತರದ ಕಾಲೇಜುಗಳ ‘ಚಹ ಕಪ್ಪಿನಲ್ಲಿ ಬಿರುಗಾಳಿ’

ತಾಯಿಯೇ ಮೊದಲ ಶಿಕ್ಷಕಿ; ಮನೆಯೇ ಮೊದಲ ಪಾಠ ಶಾಲೆ’ ಎನ್ನುವ ನಾಣ್ಣುಡಿಯನ್ನು ಆಗಾಗ್ಗೆ ಕೇಳುತ್ತಿರುತ್ತೇವೆ. ದಲಿತರಲ್ಲದ ಬಲಿಷ್ಠ ಜಾತಿಗಳ ಅಷ್ಟೇ…

4 hours ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

4 hours ago